<p><strong>ಹುಣಸಗಿ (ಯಾದಗಿರಿ ಜಿಲ್ಲೆ):</strong> ತಾಲ್ಲೂಕಿನ ಹಲವೆಡೆ ಭಾನುವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ಉಕ್ಕಿ ಹರಿದಿದ್ದು, ಹಳ್ಳದ ನೀರಿಗೆ ಕುರಿ, ಕೋಳಿಗಳು ಕೊಚ್ಚಿಕೊಂಡು ಹೋಗಿವೆ.</p>.ಕಮಲಾಪುರ | ಧಾರಾಕಾರ ಮಳೆ: ಮನೆಗಳಿಗೆ ಹೊಕ್ಕಿದ ನೀರು, ಕಾಳಜಿ ಕೇಂದ್ರದಲ್ಲಿ ಆಶ್ರಯ.<p>ಹುಣಸಗಿ ಪಟ್ಟಣದ ಹಿರೇಹಳ್ಳದಿಂದ ದೇವಪುರವರೆಗಿನ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದಾಗಿ ಹಳ್ಳದ ಪಕ್ಕದಲ್ಲಿರುವ ಜಮೀನುಗಳಿಗೆ ಹಳ್ಳದ ನೀರು ನುಗ್ಗಿದೆ. ತಾಲ್ಲೂಕಿನ ಹೆಬ್ಬಾಳ ಕೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೆ ನೀರು ತುಂಬಿ ಹರಿಯುತ್ತಿದೆ.</p><p>ತಾಲ್ಲೂಕಿನ ಗೆದ್ದಲಮರಿ ಬಲಶೆಟ್ಟಿಹಾಳ ಮಧ್ಯದ ಸೇತುವೆ ಕೂಡ ತುಂಬಿ ಹರಿಯುತ್ತಿದ್ದು, ಸೇತುವೆಯೂ ಮುಳುಗಡೆಯಾಗಿದೆ. ಗೆದ್ದಲಮರಿ- ಹುಣಸಗಿ ಸಂಪರ್ಕ ಕಡಿತಗೊಂಡಿದೆ. ಹನುಮಸಾಗರ ಗ್ರಾಮದಲ್ಲಿ ಮಳೆಯ ಹೊಡೆತಕ್ಕೆ ಸುಮಾರು 20ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಕುರಿಗಳೂ ಸಾವನ್ನಪ್ಪಿದ್ದು, ಕೆಲವು ಕೊಚ್ಚಿಕೊಂಡು ಹೋಗಿವೆ. ನೀರಿನ ರಭಸಕ್ಕೆ ಎತ್ತಿನ ಬಂಡೆಯೊಂದು ಕೊಚ್ಚಿಕೊಂಡು ಹೋಗಿ ತಗ್ಗಿಗೆ ಬಿದ್ದಿದೆ ಎಂದು ರೈತರು ತಿಳಿಸಿದ್ದಾರೆ. </p>.ಕಲಬುರಗಿ | ಬದುಕು ದುಸ್ತರಗೊಳಿಸಿದ ಮಳೆ–ಪ್ರವಾಹ: ಬೆಳೆಹಾನಿಯಿಂದ ಅನ್ನದಾತ ವಿಲವಿಲ.<p>ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಪರಶುರಾಮ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p> .ಬಳ್ಳಾರಿ | ನಿರಂತರ ಮಳೆ: ಸಿರುಗುಪ್ಪ ತಾಲ್ಲೂಕಿನಾದ್ಯಂತ 4 ಮನೆಗಳಿಗೆ ಹಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ (ಯಾದಗಿರಿ ಜಿಲ್ಲೆ):</strong> ತಾಲ್ಲೂಕಿನ ಹಲವೆಡೆ ಭಾನುವಾರ ತಡರಾತ್ರಿ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ಉಕ್ಕಿ ಹರಿದಿದ್ದು, ಹಳ್ಳದ ನೀರಿಗೆ ಕುರಿ, ಕೋಳಿಗಳು ಕೊಚ್ಚಿಕೊಂಡು ಹೋಗಿವೆ.</p>.ಕಮಲಾಪುರ | ಧಾರಾಕಾರ ಮಳೆ: ಮನೆಗಳಿಗೆ ಹೊಕ್ಕಿದ ನೀರು, ಕಾಳಜಿ ಕೇಂದ್ರದಲ್ಲಿ ಆಶ್ರಯ.<p>ಹುಣಸಗಿ ಪಟ್ಟಣದ ಹಿರೇಹಳ್ಳದಿಂದ ದೇವಪುರವರೆಗಿನ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದಾಗಿ ಹಳ್ಳದ ಪಕ್ಕದಲ್ಲಿರುವ ಜಮೀನುಗಳಿಗೆ ಹಳ್ಳದ ನೀರು ನುಗ್ಗಿದೆ. ತಾಲ್ಲೂಕಿನ ಹೆಬ್ಬಾಳ ಕೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯ ಮೇಲೆ ನೀರು ತುಂಬಿ ಹರಿಯುತ್ತಿದೆ.</p><p>ತಾಲ್ಲೂಕಿನ ಗೆದ್ದಲಮರಿ ಬಲಶೆಟ್ಟಿಹಾಳ ಮಧ್ಯದ ಸೇತುವೆ ಕೂಡ ತುಂಬಿ ಹರಿಯುತ್ತಿದ್ದು, ಸೇತುವೆಯೂ ಮುಳುಗಡೆಯಾಗಿದೆ. ಗೆದ್ದಲಮರಿ- ಹುಣಸಗಿ ಸಂಪರ್ಕ ಕಡಿತಗೊಂಡಿದೆ. ಹನುಮಸಾಗರ ಗ್ರಾಮದಲ್ಲಿ ಮಳೆಯ ಹೊಡೆತಕ್ಕೆ ಸುಮಾರು 20ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಕುರಿಗಳೂ ಸಾವನ್ನಪ್ಪಿದ್ದು, ಕೆಲವು ಕೊಚ್ಚಿಕೊಂಡು ಹೋಗಿವೆ. ನೀರಿನ ರಭಸಕ್ಕೆ ಎತ್ತಿನ ಬಂಡೆಯೊಂದು ಕೊಚ್ಚಿಕೊಂಡು ಹೋಗಿ ತಗ್ಗಿಗೆ ಬಿದ್ದಿದೆ ಎಂದು ರೈತರು ತಿಳಿಸಿದ್ದಾರೆ. </p>.ಕಲಬುರಗಿ | ಬದುಕು ದುಸ್ತರಗೊಳಿಸಿದ ಮಳೆ–ಪ್ರವಾಹ: ಬೆಳೆಹಾನಿಯಿಂದ ಅನ್ನದಾತ ವಿಲವಿಲ.<p>ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಪರಶುರಾಮ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p> .ಬಳ್ಳಾರಿ | ನಿರಂತರ ಮಳೆ: ಸಿರುಗುಪ್ಪ ತಾಲ್ಲೂಕಿನಾದ್ಯಂತ 4 ಮನೆಗಳಿಗೆ ಹಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>