<p><strong>ಕೆಂಭಾವಿ:</strong> ಪಟ್ಟಣ ಸೇರಿದಂತೆ ವಲಯದ ಬಹುತೇಕ ಗ್ರಾಮಗಳಲ್ಲಿ ಮಳೆಯಾರ್ಭಟ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿದ ಭಾರಿ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ.</p>.<p>ಪಟ್ಟಣ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹತ್ತಿ ಮತ್ತು ತೊಗರಿ ಬೆಳೆಗಳ ಹೊಲಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಬೆಳಗಳು ಸಂಪೂರ್ಣ ಕೊಳೆತು ಹೋಗುವ ಹಂತಕ್ಕೆ ತಲುಪಿದ್ದು, ರೈತರ ಸ್ಥಿತಿ ಚಿಂತಾಜನಕ ತಲುಪುವ ಲಕ್ಷಣಗಳು ಉದ್ಭವವಾಗಿವೆ.</p>.<p>ಪಟ್ಟಣ ಸೇರಿದಂತೆ ಯಾಳಗಿ, ಐನಾಪೂರ, ನಗನೂರ, ಎಂ.ಬೊಮ್ಮನಹಳ್ಳಿ, ಕಿರದಳ್ಳಿ, ಖಾನಾಪೂರ ಎಸ್.ಕೆ ಗ್ರಾಮಗಳ ಒಟ್ಟು 13 ಮನೆಗಳಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. </p>.<p>ನಿರಂತರ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು ಹುಣಸಗಿ-ಕೆಂಭಾವಿ ರಸ್ತೆ ಬಂದ್ ಆಗಿದೆ. ಕೆಂಭಾವಿ-ಮಲ್ಲಾ ರಸ್ತೆಯಲ್ಲಿರುವ ಕಾಟಮ್ಹಳ್ಳ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತವಾಗುವ ಲಕ್ಷಣಗಳು ಕಾಣಿಸುತ್ತವೆ.</p>.<p>ಸಮೀಪದ ಫತ್ತೇಪೂರ ಗ್ರಾಮದ ಯಲ್ಲಮ್ಮ ಗುಡ್ಡದಲ್ಲಿ ಮಳೆಯಿಂದ ಜಲಪಾತ ಸೃಷ್ಟಿಯಾಗಿದ್ದು, ನೋಡುಗರನ್ನು ಕೈಬೀಸಿ ಕರೆಯುತ್ತಿದೆ. ಭೋರ್ಗರೆಯುತ್ತಿರುವ ಪ್ರಕೃತಿ ಸೌಂದರ್ಯವನ್ನು ನೋಡಲು ಜನತೆ ತಂಡೋಪ ತಂಡವಾಗಿ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. </p>.<div><blockquote>ಕೆಂಭಾವಿ ವಲಯದಲ್ಲಿ ಶುಕ್ರವಾರ ನಿರಂತರ ಸುರಿದ ಮಳೆಗೆ ಒಟ್ಟು 13 ಮನೆಗಳು ಬಿದ್ದಿರುವ ಬಗ್ಗೆ ವರದಿಯಾಗಿದೆ. ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. </blockquote><span class="attribution">ರಾಜೇಸಾಬ್ ಕಂದಾಯ ನಿರೀಕ್ಷಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಪಟ್ಟಣ ಸೇರಿದಂತೆ ವಲಯದ ಬಹುತೇಕ ಗ್ರಾಮಗಳಲ್ಲಿ ಮಳೆಯಾರ್ಭಟ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿದ ಭಾರಿ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿದೆ.</p>.<p>ಪಟ್ಟಣ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹತ್ತಿ ಮತ್ತು ತೊಗರಿ ಬೆಳೆಗಳ ಹೊಲಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಬೆಳಗಳು ಸಂಪೂರ್ಣ ಕೊಳೆತು ಹೋಗುವ ಹಂತಕ್ಕೆ ತಲುಪಿದ್ದು, ರೈತರ ಸ್ಥಿತಿ ಚಿಂತಾಜನಕ ತಲುಪುವ ಲಕ್ಷಣಗಳು ಉದ್ಭವವಾಗಿವೆ.</p>.<p>ಪಟ್ಟಣ ಸೇರಿದಂತೆ ಯಾಳಗಿ, ಐನಾಪೂರ, ನಗನೂರ, ಎಂ.ಬೊಮ್ಮನಹಳ್ಳಿ, ಕಿರದಳ್ಳಿ, ಖಾನಾಪೂರ ಎಸ್.ಕೆ ಗ್ರಾಮಗಳ ಒಟ್ಟು 13 ಮನೆಗಳಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. </p>.<p>ನಿರಂತರ ಮಳೆಯಿಂದ ರಸ್ತೆಗಳು ಹದಗೆಟ್ಟಿದ್ದು ಹುಣಸಗಿ-ಕೆಂಭಾವಿ ರಸ್ತೆ ಬಂದ್ ಆಗಿದೆ. ಕೆಂಭಾವಿ-ಮಲ್ಲಾ ರಸ್ತೆಯಲ್ಲಿರುವ ಕಾಟಮ್ಹಳ್ಳ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತವಾಗುವ ಲಕ್ಷಣಗಳು ಕಾಣಿಸುತ್ತವೆ.</p>.<p>ಸಮೀಪದ ಫತ್ತೇಪೂರ ಗ್ರಾಮದ ಯಲ್ಲಮ್ಮ ಗುಡ್ಡದಲ್ಲಿ ಮಳೆಯಿಂದ ಜಲಪಾತ ಸೃಷ್ಟಿಯಾಗಿದ್ದು, ನೋಡುಗರನ್ನು ಕೈಬೀಸಿ ಕರೆಯುತ್ತಿದೆ. ಭೋರ್ಗರೆಯುತ್ತಿರುವ ಪ್ರಕೃತಿ ಸೌಂದರ್ಯವನ್ನು ನೋಡಲು ಜನತೆ ತಂಡೋಪ ತಂಡವಾಗಿ ಆಗಮಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. </p>.<div><blockquote>ಕೆಂಭಾವಿ ವಲಯದಲ್ಲಿ ಶುಕ್ರವಾರ ನಿರಂತರ ಸುರಿದ ಮಳೆಗೆ ಒಟ್ಟು 13 ಮನೆಗಳು ಬಿದ್ದಿರುವ ಬಗ್ಗೆ ವರದಿಯಾಗಿದೆ. ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. </blockquote><span class="attribution">ರಾಜೇಸಾಬ್ ಕಂದಾಯ ನಿರೀಕ್ಷಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>