ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶಿಬಾ ಜಿಲಿಯನ್, ಯಾದಗಿರಿ ಡಯಟ್ ಕಾಲೇಜಿನ ಉಪನ್ಯಾಸಕಿ ಇಂದಿರಾ ಬಡಿಗೇರಾ, ಅಲ್ಲಿಪುರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ವಿದ್ಯಾ ಸಜ್ಜನ್, ಬಳಿಚಕ್ರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅನ್ನಪೂರ್ಣ, ಕಂದಕೂರ ಪ್ರೌಢಶಾಲೆಯ ಸಹಶಿಕ್ಷಕಿ ಮಧುಮತಿ, ಬಂದಳ್ಳಿ ಪ್ರೌಢಶಾಲೆಯ ಸಹಶಿಕ್ಷಕಿ ಸುರೇಖಾ, ಯಾದಗಿರಿ ಸ್ಟೇಷನ್ ಬಜಾರ್ ಪ್ರೌಢಶಾಲೆಯ ಸಹಶಿಕ್ಷಕಿ ಗೀತಾ, ನ್ಯೂ ಕನ್ನಡ ಪ್ರೌಢಶಾಲೆಯ ಮಲ್ಲಮ್ಮ, ಅಂಗನವಾಡಿ ಕಾರ್ಯಕರ್ತೆ ಗೀತಾ, ಪದವಿ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಇವರು ನಾಟಕ ಪ್ರದರ್ಶನದಲ್ಲಿ ವಿವಿಧ ಪಾತ್ರಗಳನ್ನು ನಿಭಾಯಿಸಿ ಗಮನ ಸೆಳೆದು, ಹೆಣ್ಣು ಭ್ರೂಣ ಹತ್ಯೆ ತಡೆಯಲು ಸಂದೇಶ ನೀಡಿದರು.