ಕೆಂಭಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಪತಿ, ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬುಧವಾರ ಪಟ್ಟಣದಲ್ಲಿ ಸಂಭವಿಸಿದೆ.
ಪಟ್ಟಣದ ಹಿಲ್ಟಾಪ್ ಕಾಲೋನಿಯ ನಿವಾಸಿ ಮಹ್ಮದ್ ಜಾಫರ್ (39) ತನ್ನ ಪತ್ನಿ ಹಮೀದಾಬಿ (31) ಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.
ತನ್ನ ಪತ್ನಿ ಪಾಸ್ಪೋರ್ಟ್ ಮಾಡಿಸಿ ದುಬೈಗೆ ಹೋಗುತ್ತೇನೆ ಎಂದು ಹಠ ಹಿಡಿದಿದ್ದ ಕಾರಣ ಬೇಸತ್ತ ಪತಿ ಬುಧವಾರ ಮಧ್ಯಾಹ್ನ ತಲೆಗೆ ಕಟ್ಟಿಗೆಯಿಂದ ಹೊಡೆದು ನಂತರ ಬಾಯಿಯಲ್ಲಿ ಬಟ್ಟೆಯನ್ನು ತುರುಕಿ ಚಾಕುವಿನಿಂದ ಕುತ್ತಿಗೆ ಸೀಳಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಆಗಮಿಸಿದ ಸಿಪಿಐ ಪಂಡಿತ ಸಗರ ಮತ್ತು ಪಿಎಸ್ಐ ಬಾಲನಗೌಡ ಪರಿಶೀಲನೆ ನಡೆಸಿದರು. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಿಎಸ್ಐ ತಿಳಿಸಿದ್ದಾರೆ.