<p><strong>ಯಾದಗಿರಿ:</strong> ಜಿಲ್ಲೆಗೆ ಮಹಾನಗರಗಳಿಂದ ಹಿಂದಿರುಗಿ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ವಲಸಿಗರ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ‘ವಲಸಿಗರ ಸಮೀಕ್ಷೆ ಕಾರ್ಯ’ ಶನಿವಾರ ಆರಂಭವಾಗಿದೆ.</p>.<p>ಮೊದಲ ಹಂತವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ವಲಸಿಗರು ಹಿಂದಿರು ಗಿರುವ ಯಾದಗಿರಿ ತಾಲ್ಲೂಕಿನ ಕೌಳೂರು, ಶಹಾಪುರ ತಾಲ್ಲೂಕಿನ ದೋರನಹಳ್ಳಿ ಮತ್ತು ಸುರಪುರ ತಾಲ್ಲೂಕಿನ ಬರದೇವನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಸಮೀಕ್ಷೆ ಕಾರ್ಯ ಪ್ರಾರಂಭಿಸಲಾಗಿದೆ.</p>.<p>ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿಗಳು, ಕರವಸೂ ಲಿಗಾರರು, ಕಂಪ್ಯೂಟರ್ ಆಪರೇಟರ್ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿದ್ದಾರೆ.</p>.<p>ಯಾದಗಿರಿ ತಾಲ್ಲೂಕಿನ ಕೌಳೂರು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾ ಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಭೇಟಿ ನೀಡಿ ಮನೆಮನೆ ಸಮೀಕ್ಷೆ ಮಾಡುವ ಸಿಬ್ಬಂದಿಗೆ ತರಬೇತಿ ನೀಡಿದರು. ನಂತರ ಬೆಂಗಳೂರಿನಿಂದ ಹಿಂದಿರುಗಿದ ಐದು ಕುಟುಂಬಗಳ ಸಮೀಕ್ಷೆ ಕಾರ್ಯ ಮೇಲ್ವಿಚಾರಣೆ ಮಾಡಿದರು.</p>.<p>ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಪಂಗೆ ತೆರಳಿ ಮುಂಬೈನಿಂದ ಹಿಂದಿರುಗಿದ ವಲಸಿಗರ ಮನೆಗಳ ಸಮೀಕ್ಷೆ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಗೆ ಮಹಾನಗರಗಳಿಂದ ಹಿಂದಿರುಗಿ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ವಲಸಿಗರ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ‘ವಲಸಿಗರ ಸಮೀಕ್ಷೆ ಕಾರ್ಯ’ ಶನಿವಾರ ಆರಂಭವಾಗಿದೆ.</p>.<p>ಮೊದಲ ಹಂತವಾಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ವಲಸಿಗರು ಹಿಂದಿರು ಗಿರುವ ಯಾದಗಿರಿ ತಾಲ್ಲೂಕಿನ ಕೌಳೂರು, ಶಹಾಪುರ ತಾಲ್ಲೂಕಿನ ದೋರನಹಳ್ಳಿ ಮತ್ತು ಸುರಪುರ ತಾಲ್ಲೂಕಿನ ಬರದೇವನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಸಮೀಕ್ಷೆ ಕಾರ್ಯ ಪ್ರಾರಂಭಿಸಲಾಗಿದೆ.</p>.<p>ಗ್ರಾಮ ಪಂಚಾಯಿತಿಗಳ ಕಾರ್ಯದರ್ಶಿಗಳು, ಕರವಸೂ ಲಿಗಾರರು, ಕಂಪ್ಯೂಟರ್ ಆಪರೇಟರ್ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿದ್ದಾರೆ.</p>.<p>ಯಾದಗಿರಿ ತಾಲ್ಲೂಕಿನ ಕೌಳೂರು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾ ಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಭೇಟಿ ನೀಡಿ ಮನೆಮನೆ ಸಮೀಕ್ಷೆ ಮಾಡುವ ಸಿಬ್ಬಂದಿಗೆ ತರಬೇತಿ ನೀಡಿದರು. ನಂತರ ಬೆಂಗಳೂರಿನಿಂದ ಹಿಂದಿರುಗಿದ ಐದು ಕುಟುಂಬಗಳ ಸಮೀಕ್ಷೆ ಕಾರ್ಯ ಮೇಲ್ವಿಚಾರಣೆ ಮಾಡಿದರು.</p>.<p>ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಪಂಗೆ ತೆರಳಿ ಮುಂಬೈನಿಂದ ಹಿಂದಿರುಗಿದ ವಲಸಿಗರ ಮನೆಗಳ ಸಮೀಕ್ಷೆ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>