ಈ ವೇಳೆ ಮಾತನಾಡಿದ ಅವರು, 'ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳು ಶನಿವಾರ ಬೆಳಿಗ್ಗೆ ಚಹಾ ಬಿಸ್ಕತ್ತು ಸೇವಿಸಿದ ಕೆಲವರಿಗೆ ವಾಂತಿಯಾಗಿದೆ. ಇನ್ನೂ ಕೆಲವರಿಗೆ ಹೊಟ್ಟೆನೋವು ಕಾಣಿಕೊಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಆರೋಗ್ಯವಾಗಿದ್ದಾರೆ. ನೀರು, ಚಹಾ, ಬಿಸ್ಕತ್ತು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ವರದಿ ಬಂದ ನಂತರ ಸಂಪೂರ್ಣ ಮಾಹಿತಿ ತಿಳಿದು ಬರಲಿದೆ' ಎಂದು ತಿಳಿಸಿದರು.