<p><strong>ಹುಣಸಗಿ</strong>: ಪಟ್ಟಣದ ಬಸ್ ನಿಲ್ದಾಣದ ಬಳಿ ಕಳೆದ ಮೂರು ನಾಲ್ಕು ವರ್ಷಗಳ ಹಿಂದೆಯೇ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಯನ್ನು ನಿರ್ಮಿಸಲಾಗಿದ್ದು, ಉದ್ಘಾಟನೆಗೆ ಹಿರಿಯ ನಾಯಕರ ಆಗಮಿಸುವ ಕುರಿತಂತೆ ಚರ್ಚಿಸಿರುವುದಾಗಿ ಮುಖಂಡ ಹಾಗೂ ಭೂ ನ್ಯಾಯಮಂಡಳಿ ಸದಸ್ಯ ಮಲ್ಲಣ್ಣ ಕಟ್ಟಿಮನಿ ತಿಳಿಸಿದರು.</p><p>ಈ ಕುರಿತು ಬೆಂಗಳೂರನಲ್ಲಿ ಶಾಸಕ ರಾಜಾ ವೇಣುಗೋಪಾಲನಾಯಕ ಅವರ ನೇತೃತ್ವದ ನಿಯೋಗವು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ಹೇಳಿದರು.</p><p>‘ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಈಗಾಗಲೇ ಸಭೆಯನ್ನು ನಡೆಸಲಾಗಿದ್ದು, ಸೂಕ್ತ ದಿನಾಂಕ ಮತ್ತು ಸಮಯ ನಿಗದಿಮಾಡಿ ಎಲ್ಲ ಹಿರಿನಾಯಕರಿಗೂ ಆಮಂತ್ರಿಸಲು ಸಮಯಾವಕಾಶ ನೀಡುವಂತೆ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.</p><p>‘ದಿನಾಂಕ ನಿಗದಿಗೊಳಿಸಿ ಏಪ್ರೀಲ್ ತಿಂಗಳಲ್ಲಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಿಳಿಸಿದ್ದಾರೆ’ ಎಂದು ಮುಖಂಡರಾದ ಶರಣಪ್ಪ ಮಾಸ್ತರ ಹೇಳಿದರು.</p><p>ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ಭೀಮಣ್ಣ ನಾಟೇಕಾರ ಪರಶು ಮುದನೂರು ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ಪಟ್ಟಣದ ಬಸ್ ನಿಲ್ದಾಣದ ಬಳಿ ಕಳೆದ ಮೂರು ನಾಲ್ಕು ವರ್ಷಗಳ ಹಿಂದೆಯೇ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಯನ್ನು ನಿರ್ಮಿಸಲಾಗಿದ್ದು, ಉದ್ಘಾಟನೆಗೆ ಹಿರಿಯ ನಾಯಕರ ಆಗಮಿಸುವ ಕುರಿತಂತೆ ಚರ್ಚಿಸಿರುವುದಾಗಿ ಮುಖಂಡ ಹಾಗೂ ಭೂ ನ್ಯಾಯಮಂಡಳಿ ಸದಸ್ಯ ಮಲ್ಲಣ್ಣ ಕಟ್ಟಿಮನಿ ತಿಳಿಸಿದರು.</p><p>ಈ ಕುರಿತು ಬೆಂಗಳೂರನಲ್ಲಿ ಶಾಸಕ ರಾಜಾ ವೇಣುಗೋಪಾಲನಾಯಕ ಅವರ ನೇತೃತ್ವದ ನಿಯೋಗವು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ಹೇಳಿದರು.</p><p>‘ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಅನಾವರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಈಗಾಗಲೇ ಸಭೆಯನ್ನು ನಡೆಸಲಾಗಿದ್ದು, ಸೂಕ್ತ ದಿನಾಂಕ ಮತ್ತು ಸಮಯ ನಿಗದಿಮಾಡಿ ಎಲ್ಲ ಹಿರಿನಾಯಕರಿಗೂ ಆಮಂತ್ರಿಸಲು ಸಮಯಾವಕಾಶ ನೀಡುವಂತೆ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.</p><p>‘ದಿನಾಂಕ ನಿಗದಿಗೊಳಿಸಿ ಏಪ್ರೀಲ್ ತಿಂಗಳಲ್ಲಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಿಳಿಸಿದ್ದಾರೆ’ ಎಂದು ಮುಖಂಡರಾದ ಶರಣಪ್ಪ ಮಾಸ್ತರ ಹೇಳಿದರು.</p><p>ಈ ಸಂದರ್ಭದಲ್ಲಿ ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ಭೀಮಣ್ಣ ನಾಟೇಕಾರ ಪರಶು ಮುದನೂರು ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>