<p>ಹುಣಸಗಿ: ‘ತಾಲ್ಲೂಕಿನ ಮಾಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಲಬಾವಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದರೆ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ಗ್ರಾಮದ ಪ್ರಕಾಶ ಬಡಿಗೇರ ಆರೋಪಿಸಿದರು.</p>.<p>‘ಈ ಕುರಿತು ಸೋಮವಾರ ಮಧ್ಯಾಹ್ನ ಮಾರಲಬಾವಿ ಗ್ರಾಮದ ಜನರು ಮಹಿಳೆಯೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರೂ ಅಲ್ಲಿ ಸ್ಥಳಿಯವಾಗಿ ಯಾರೂ ಲಭ್ಯವಾಗಿಲ್ಲ. ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ’ ಎಂದರು.</p>.<p>‘ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಂಪರ್ಕಿಸಿದರೂ ಕೂಡಾ ಸಮಸ್ಯೆ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇದೇ ಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲಿ ಉಗ್ರ ಹೊರಾಟ ಮಾಡಬೇಕಾಗುತ್ತದೆ’ ಎಂದು ರಾಜ್ಯ ರೈತ ಸಂಘದ ಪ್ರಮುಖ ದೇವೇಗೌಡ ಮಾಲಿ ಎಚ್ಚರಿಸಿದರು.</p>.<p>ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ತಹಶೀಲ್ದಾರ್ ಎಂ.ಬಸವರಾಜ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾಳನೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ, ಶಂಕ್ರಪ್ಪ, <br />ಮಾರಲಬಾವಿ ಗ್ರಾಮದ ದೇವಪ್ಪ ಪೂಜಾರಿ, ರಮೇಶ ಕೋಳೂರ, ಬಸಣ್ಣ ಕಟ್ಟಿಮನಿ, ಹುಲಗಪ್ಪ ಕರಿಗೌಡ್ರ, ದೇವಿಂದ್ರ ವಿಶ್ವಕರ್ಮ, ಹುಗಲಗಪ್ಪ ಬೂದಿಹಾಳ, ಪರಶುರಾಮ, ಭೀಮಾಶಂಕರ ಸುಬೇದಾರ, ದೇವೇಗೌಡ ಪಾಟೀಲ ರುದ್ರಮ್ಮ ಹಿರೇಮಠ, ನೀಲಮ್ಮ ಕೋಳೂರ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ‘ತಾಲ್ಲೂಕಿನ ಮಾಳನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಲಬಾವಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಆದರೆ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ’ ಎಂದು ಗ್ರಾಮದ ಪ್ರಕಾಶ ಬಡಿಗೇರ ಆರೋಪಿಸಿದರು.</p>.<p>‘ಈ ಕುರಿತು ಸೋಮವಾರ ಮಧ್ಯಾಹ್ನ ಮಾರಲಬಾವಿ ಗ್ರಾಮದ ಜನರು ಮಹಿಳೆಯೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರೂ ಅಲ್ಲಿ ಸ್ಥಳಿಯವಾಗಿ ಯಾರೂ ಲಭ್ಯವಾಗಿಲ್ಲ. ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ’ ಎಂದರು.</p>.<p>‘ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸಂಪರ್ಕಿಸಿದರೂ ಕೂಡಾ ಸಮಸ್ಯೆ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇದೇ ಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲಿ ಉಗ್ರ ಹೊರಾಟ ಮಾಡಬೇಕಾಗುತ್ತದೆ’ ಎಂದು ರಾಜ್ಯ ರೈತ ಸಂಘದ ಪ್ರಮುಖ ದೇವೇಗೌಡ ಮಾಲಿ ಎಚ್ಚರಿಸಿದರು.</p>.<p>ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ತಹಶೀಲ್ದಾರ್ ಎಂ.ಬಸವರಾಜ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.</p>.<p>ಈ ಸಂದರ್ಭದಲ್ಲಿ ಮಾಳನೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ, ಶಂಕ್ರಪ್ಪ, <br />ಮಾರಲಬಾವಿ ಗ್ರಾಮದ ದೇವಪ್ಪ ಪೂಜಾರಿ, ರಮೇಶ ಕೋಳೂರ, ಬಸಣ್ಣ ಕಟ್ಟಿಮನಿ, ಹುಲಗಪ್ಪ ಕರಿಗೌಡ್ರ, ದೇವಿಂದ್ರ ವಿಶ್ವಕರ್ಮ, ಹುಗಲಗಪ್ಪ ಬೂದಿಹಾಳ, ಪರಶುರಾಮ, ಭೀಮಾಶಂಕರ ಸುಬೇದಾರ, ದೇವೇಗೌಡ ಪಾಟೀಲ ರುದ್ರಮ್ಮ ಹಿರೇಮಠ, ನೀಲಮ್ಮ ಕೋಳೂರ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>