ಪ್ರಥಮ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗುವ ನಿಟ್ಟಿನಲ್ಲಿ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೋಳ್ಳಲಾಗಿದೆ
ವೆಂಕಟಗಿರಿ ದೇಶಪಾಂಡೆ ಕಸಾಪ ತಾಲ್ಲೂಕು ಅಧ್ಯಕ್ಷ
ಆರು ದಶಕಗಳಿಂದಲೂ ಹುಣಸಗಿಯಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗಿದೆ. ಸದ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ಅತ್ಯಂತ ಸಂತಸ ತಂದಿದೆ
ವಿರೇಶ ಹಳ್ಳೂರ ಸಮ್ಮೇಳನದ ಸರ್ವಾಧ್ಯಕ್ಷ
ಸಮ್ಮೇಳನದ ಸರ್ವಾಧ್ಯಕ್ಷರ ಪರಿಚಯ
ಜಿಲ್ಲೆಯ ಹಿರಿಯ ಸಾಹಿತಿಗಳಲ್ಲಿ ಒಬ್ಬರಾಗಿರುವ ಹುಣಸಗಿಯ ವಿರೇಶ ಹಳ್ಳೂರ ಅವರು ವಿಜಯಪುರ ಜಿಲ್ಲೆಯ ಹಳ್ಳೂರ ಗ್ರಾಮದಲ್ಲಿ1940 ಏ.13 ರಂದು ಜನಿಸಿದರು. ವಿರೇಶ ಹಳ್ಳೂರ ಅವರು ಶಿಕ್ಷಕರಾಗಿ ತಾಲ್ಲೂಕಿನ ವಜ್ಜಲ ಮುದನೂರು ಹುಣಸಗಿ ಮತ್ತಿರ ಗ್ರಾಮಗಳಲ್ಲಿ ಸೇವೆ ಸಲ್ಲಿಸಿ 1998ರಲ್ಲಿ ನಿವೃತ್ತರಾದರು. ಕಳೆದ ಆರು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೇ ಈ ಹಿಂದೆ ಹುಣಸಗಿ ವಲಯ ಕಸಾಪ ಅಧ್ಯಕ್ಷರಾಗಿ ಕೂಡಾ ಸೇವೆಸಲ್ಲಿಸಿದ್ದಾರೆ. ಇವರ ಹಲವಾರು ಕಥೆ ಕವನಗಳು ಚಿಂತನಗಳು ರೇಡಿಯೋದಲ್ಲಿ ಬಿತ್ತರಗೊಂಡಿವೆ.