<p><strong>ಹುಣಸಗಿ: </strong>ಪಟ್ಟಣ ಸೇರಿದಂತೆ ಹೆಬ್ಬಾಳ, ಬಿ, ವಜ್ಜಲ, ಬೈಲಾಫುರ ಸೇರಿದಂತೆ ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p><p>ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಶನಿವಾರ ಭೇಟಿ ನೀಡಿ ಪ್ಬರಗತಿಯ ಕುರಿತು ಮಾಹಿತಿ ಪಡೆದುಕೊಂಡು ಹಲವಾರು ಸಲಹೆ ಸೂಚನೆ ನೀಡಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮನೆ ಮನೆ ಸಮೀಕ್ಷೆಯನ್ನು ಇ-ಆಡಳಿತ ಮೊಬೈಲ್ ಆಪ್ ಮುಖಾಂತರ ನಡೆಸಲಾಗುತ್ತಿದೆ. ಜಿಲ್ಲೆಯಾದ್ಯಂತ ಜೆಸ್ಕಾಂ ಯುಎಚ್ಐಡಿ ಸಂಖ್ಯೆ ನೀಡುವ ಮೂಲಕ ಕುಟುಂಬಗಳನ್ನು ಗುರುತಿಸಲಾಗಿದೆ ಅದರಂತೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದರು. ಜಿಲ್ಲೆಯಲ್ಲಿ ಬಹುತೇಕ ಕಾರ್ಯ ಪೂರ್ಣ ಹಂತದಲ್ಲಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಒಟ್ಟು 2,13,268 ಜನರಲ್ಲಿ 1,77,488 ಜನರ ಸಮಿಕ್ಷಾ ಪೂರ್ಣಗೊಂಡಿದೆ. ಶೇ 83.22 ರಷ್ಟು ಪೂರ್ಣವಾಗಿದೆ ಎಂದು ಹುಣಸಗಿ ತಹಶೀಲ್ದಾರ್ ಎಂ. ಬಸವರಾಜ ಮಾಹಿತಿ ನೀಡಿದ್ದಾರೆ.</p>.<p>ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಕಲ್ಲಪ್ಪ, ಸಹಾಯಕ ನೋಡಲ್ ಅಧಿಕಾರಿ ಕಾಂತೇಶ್ ಹಲಗಿಮನಿ, ಕಂದಾಯ ನಿರೀಕ್ಷಕ ರವಿ ಹಿರೇಮಠ್, ಗಣತಿದಾರ ಪರುಶುರಾಮ, ಗ್ರಾಮ ಆಡಳಿತ ಅಧಿಕಾರಿ ಹಸನ್ ಮುಲ್ಲಾ, ಶಿವಲೀಲಾ ಬಿರಾದಾರ, ನಾಗರತ್ನ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ: </strong>ಪಟ್ಟಣ ಸೇರಿದಂತೆ ಹೆಬ್ಬಾಳ, ಬಿ, ವಜ್ಜಲ, ಬೈಲಾಫುರ ಸೇರಿದಂತೆ ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p><p>ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಶನಿವಾರ ಭೇಟಿ ನೀಡಿ ಪ್ಬರಗತಿಯ ಕುರಿತು ಮಾಹಿತಿ ಪಡೆದುಕೊಂಡು ಹಲವಾರು ಸಲಹೆ ಸೂಚನೆ ನೀಡಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮನೆ ಮನೆ ಸಮೀಕ್ಷೆಯನ್ನು ಇ-ಆಡಳಿತ ಮೊಬೈಲ್ ಆಪ್ ಮುಖಾಂತರ ನಡೆಸಲಾಗುತ್ತಿದೆ. ಜಿಲ್ಲೆಯಾದ್ಯಂತ ಜೆಸ್ಕಾಂ ಯುಎಚ್ಐಡಿ ಸಂಖ್ಯೆ ನೀಡುವ ಮೂಲಕ ಕುಟುಂಬಗಳನ್ನು ಗುರುತಿಸಲಾಗಿದೆ ಅದರಂತೆ ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದರು. ಜಿಲ್ಲೆಯಲ್ಲಿ ಬಹುತೇಕ ಕಾರ್ಯ ಪೂರ್ಣ ಹಂತದಲ್ಲಿದೆ ಎಂದರು.</p>.<p>ತಾಲ್ಲೂಕಿನಲ್ಲಿ ಒಟ್ಟು 2,13,268 ಜನರಲ್ಲಿ 1,77,488 ಜನರ ಸಮಿಕ್ಷಾ ಪೂರ್ಣಗೊಂಡಿದೆ. ಶೇ 83.22 ರಷ್ಟು ಪೂರ್ಣವಾಗಿದೆ ಎಂದು ಹುಣಸಗಿ ತಹಶೀಲ್ದಾರ್ ಎಂ. ಬಸವರಾಜ ಮಾಹಿತಿ ನೀಡಿದ್ದಾರೆ.</p>.<p>ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಕಲ್ಲಪ್ಪ, ಸಹಾಯಕ ನೋಡಲ್ ಅಧಿಕಾರಿ ಕಾಂತೇಶ್ ಹಲಗಿಮನಿ, ಕಂದಾಯ ನಿರೀಕ್ಷಕ ರವಿ ಹಿರೇಮಠ್, ಗಣತಿದಾರ ಪರುಶುರಾಮ, ಗ್ರಾಮ ಆಡಳಿತ ಅಧಿಕಾರಿ ಹಸನ್ ಮುಲ್ಲಾ, ಶಿವಲೀಲಾ ಬಿರಾದಾರ, ನಾಗರತ್ನ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>