ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಮಹಾದೇವಿ ಬೇವಿನಾಳಮಠ ಮಾತನಾಡಿ, ‘ಎಸಿ, ಡಿಸಿ ಮತ್ತು ಪ್ರಾದೇಶಿಕ ಆಯುಕ್ತರಿಗೂ ಈ ಕುರಿತು ಮನವಿ ಮಾಡಿದ್ದಾರೆ. ದಾಖಲೆ ಕೊಡುವಂತೆ ಅವರು ಆದೇಶಿಸಿದ್ದಾರೆ. ಆದರೆ ಕಂದಾಯ ಇಲಾಖೆಯವರು ರಾಜಕೀಯ ಒತ್ತಡಕ್ಕೆ ಮಣಿದು ದಾಖಲೆ ನೀಡಲು ವಿಳಂಬ ಮಾಡುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಮುಗ್ಧರಾದ ಸಜ್ಜನ್ ಕುಟುಂಬದ ಆಸ್ತಿ ನುಂಗಿ ಹಾಕುವ ಷಡ್ಯಂತ್ರ ನಡೆದಿದೆ’ ಎಂದು ದೂರಿದರು.