<p>ನಾರಾಯಣಪುರ: ಇಲ್ಲಿನ ಬಂಡೆಗುಡ್ಡ ಕ್ಯಾಂಪ್ನ ಮಾರಿಯಮ್ಮ ದೇವಿಯ ಜಾತ್ರೆ ಬುಧವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ ದೇವಸ್ಥಾನದ ಮುಖ್ಯ ಅರ್ಚಕರು ವಿವಿಧ ವಾದ್ಯ ಮೇಳಗಳೊಂದಿಗೆ ಕೃಷ್ಣಾ ನದಿ ತಟಕ್ಕೆ ತೆರಳಿ ಗಂಗಾ ಜಲವನ್ನು ಕರಗ ಜೋಡಣೆಯೊಂದಿಗೆ ಮೆರವಣಿಗೆ ಮೂಲಕ ತಂದರು. ಬಳಿಕ ದೇವಿಯ ಮೂರ್ತಿ, ಆಯುಧಗಳಿಗೆ ಜಲಾಭಿಷೇಕ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಿದರು.</p>.<p>ದೇವಿಯನ್ನು ವಿವಿಧ ಬಗೆಯ ಹೂವು, ವಸ್ತ್ರಗಳಿಂದ ಅಲಂಕರಿಸಲಾಗಿತ್ತು.</p>.<p>ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸ್ಥಳೀಯ ಮುಖಂಡರು, ಬಂಡೆಗುಡ್ಡ ಕ್ಯಾಂಪ್ನ ಭಕ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾರಾಯಣಪುರ: ಇಲ್ಲಿನ ಬಂಡೆಗುಡ್ಡ ಕ್ಯಾಂಪ್ನ ಮಾರಿಯಮ್ಮ ದೇವಿಯ ಜಾತ್ರೆ ಬುಧವಾರ ಸಂಭ್ರಮದಿಂದ ಜರುಗಿತು.</p>.<p>ಬೆಳಿಗ್ಗೆ ದೇವಸ್ಥಾನದ ಮುಖ್ಯ ಅರ್ಚಕರು ವಿವಿಧ ವಾದ್ಯ ಮೇಳಗಳೊಂದಿಗೆ ಕೃಷ್ಣಾ ನದಿ ತಟಕ್ಕೆ ತೆರಳಿ ಗಂಗಾ ಜಲವನ್ನು ಕರಗ ಜೋಡಣೆಯೊಂದಿಗೆ ಮೆರವಣಿಗೆ ಮೂಲಕ ತಂದರು. ಬಳಿಕ ದೇವಿಯ ಮೂರ್ತಿ, ಆಯುಧಗಳಿಗೆ ಜಲಾಭಿಷೇಕ ಮಾಡುವ ಮೂಲಕ ಜಾತ್ರೆಗೆ ಚಾಲನೆ ನೀಡಿದರು.</p>.<p>ದೇವಿಯನ್ನು ವಿವಿಧ ಬಗೆಯ ಹೂವು, ವಸ್ತ್ರಗಳಿಂದ ಅಲಂಕರಿಸಲಾಗಿತ್ತು.</p>.<p>ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಸ್ಥಳೀಯ ಮುಖಂಡರು, ಬಂಡೆಗುಡ್ಡ ಕ್ಯಾಂಪ್ನ ಭಕ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>