<p><strong>ಹುಣಸಗಿ</strong>: ತಾಲ್ಲೂಕಿನ ರೈತರಿಗೆ ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಬಿತ್ತನೆಬೀಜಗಳನ್ನು ವಿತರಿಸಲಾಯಿತು.</p>.<p>ಬಿತ್ತನೆ ಬೀಜ ವಿತರಿಸಿದ ಕೃಷಿ ಅಧಿಕಾರಿ ಸಿದ್ಧಾರ್ಥ ಪಾಟೀಲ ಮಾತನಾಡಿ, ತಾಲ್ಲೂಕಿನ ಮಳೆಯಾಶ್ರಿತ ಪ್ರದೇಶ ಕಡಿಮೆ ಇದ್ದರೂ ರೈತರಿಗೆ ಮುಂಗಾರು ಅವಧಿಗೆ ಬಿತ್ತನೆಗಾಗಿ ಬೀಜಗಳ ದಾಸ್ತಾನು ಮಾಡಿಕೊಳ್ಳಲಾಗಿದ್ದು, ರೈತರು ರಿಯಾಯಿತಿ ದರದಲ್ಲಿ ಬೀಜಗಳನ್ನು ಖರೀದಿಸ ಬಹುದಾಗಿದೆ ಎಂದು ಹೇಳಿದರು.</p>.<p>11 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, 7 ಸಾವಿರ ಹೆಕ್ಟೇರ್ನಲ್ಲಿ ಹತ್ತಿ, ಹಾಗೂ 650 ಹೆಕ್ಟೇರ್ನಲ್ಲಿ ಸಜ್ಜೆ ಹಾಗೂ 1800 ಹೆಕ್ಟೇರ್ನಲ್ಲಿ ಸೂರ್ಯಕಾಂತಿ, ಜೋಳ, ಕುಸುಬೆ ಮತ್ತಿತರ ಬೆಳೆಗಳನ್ನು ಬೆಳೆಯುವ ಗುರಿ ಹೊಂದಲಾಗಿದ್ದು, ಇದಕ್ಕೆ ತಕ್ಕಂತೆ ಬೀಜಗಳ ಕ್ರಿಮಿನಾಶಕ ಮತ್ತು ಸಾವಯವ ಗೊಬ್ಬರದ ದಾಸ್ತಾನು ಮಾಡಲಾಗಿದೆ ಎಂದು ವಿವರಿಸಿದರು.</p>.<p>ಸದ್ಯ ಹುಣಸಗಿ ರೈತ ಸಂಪರ್ಕ ಕೇಂದ್ರದಲ್ಲಿ ತೊಗರಿ (ಟಿಎಸ್–3ಆರ್) 14 ಕ್ವಿಂಟಲ್, ತೊಗರಿ ಜಿಆರ್ಜಿ 811) 12 ಕ್ವಿಂಟಲ್, ಹೆಸರು 4.5 ಕ್ವಿಂಟಲ್, ಜಿಂಕ್ ಸಲ್ಫೆಟ್ 14 ಕ್ವಿಂಟಲ್ ಹಾಗೂ ಸಾವಯುವ ಗೊಬ್ಬರ ಇದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ದೀಪಾ ದೊರೆ ಹಾಗೂ ರೈತರಾದ ಮಹೇಶ ಹುಡೇದ, ಸಂಗಣ್ಣ ಕರಡಿ, ಬಸವರಾಜ ಬಿಂಜಲಬಾವಿ, ಮುತ್ತು ಕೂಡಲಗಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ತಾಲ್ಲೂಕಿನ ರೈತರಿಗೆ ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಗುರುವಾರ ಬಿತ್ತನೆಬೀಜಗಳನ್ನು ವಿತರಿಸಲಾಯಿತು.</p>.<p>ಬಿತ್ತನೆ ಬೀಜ ವಿತರಿಸಿದ ಕೃಷಿ ಅಧಿಕಾರಿ ಸಿದ್ಧಾರ್ಥ ಪಾಟೀಲ ಮಾತನಾಡಿ, ತಾಲ್ಲೂಕಿನ ಮಳೆಯಾಶ್ರಿತ ಪ್ರದೇಶ ಕಡಿಮೆ ಇದ್ದರೂ ರೈತರಿಗೆ ಮುಂಗಾರು ಅವಧಿಗೆ ಬಿತ್ತನೆಗಾಗಿ ಬೀಜಗಳ ದಾಸ್ತಾನು ಮಾಡಿಕೊಳ್ಳಲಾಗಿದ್ದು, ರೈತರು ರಿಯಾಯಿತಿ ದರದಲ್ಲಿ ಬೀಜಗಳನ್ನು ಖರೀದಿಸ ಬಹುದಾಗಿದೆ ಎಂದು ಹೇಳಿದರು.</p>.<p>11 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ, 7 ಸಾವಿರ ಹೆಕ್ಟೇರ್ನಲ್ಲಿ ಹತ್ತಿ, ಹಾಗೂ 650 ಹೆಕ್ಟೇರ್ನಲ್ಲಿ ಸಜ್ಜೆ ಹಾಗೂ 1800 ಹೆಕ್ಟೇರ್ನಲ್ಲಿ ಸೂರ್ಯಕಾಂತಿ, ಜೋಳ, ಕುಸುಬೆ ಮತ್ತಿತರ ಬೆಳೆಗಳನ್ನು ಬೆಳೆಯುವ ಗುರಿ ಹೊಂದಲಾಗಿದ್ದು, ಇದಕ್ಕೆ ತಕ್ಕಂತೆ ಬೀಜಗಳ ಕ್ರಿಮಿನಾಶಕ ಮತ್ತು ಸಾವಯವ ಗೊಬ್ಬರದ ದಾಸ್ತಾನು ಮಾಡಲಾಗಿದೆ ಎಂದು ವಿವರಿಸಿದರು.</p>.<p>ಸದ್ಯ ಹುಣಸಗಿ ರೈತ ಸಂಪರ್ಕ ಕೇಂದ್ರದಲ್ಲಿ ತೊಗರಿ (ಟಿಎಸ್–3ಆರ್) 14 ಕ್ವಿಂಟಲ್, ತೊಗರಿ ಜಿಆರ್ಜಿ 811) 12 ಕ್ವಿಂಟಲ್, ಹೆಸರು 4.5 ಕ್ವಿಂಟಲ್, ಜಿಂಕ್ ಸಲ್ಫೆಟ್ 14 ಕ್ವಿಂಟಲ್ ಹಾಗೂ ಸಾವಯುವ ಗೊಬ್ಬರ ಇದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ಕೃಷಿ ಅಧಿಕಾರಿ ದೀಪಾ ದೊರೆ ಹಾಗೂ ರೈತರಾದ ಮಹೇಶ ಹುಡೇದ, ಸಂಗಣ್ಣ ಕರಡಿ, ಬಸವರಾಜ ಬಿಂಜಲಬಾವಿ, ಮುತ್ತು ಕೂಡಲಗಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>