ನಗರದ ಸರ್ಕಿಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷಸ್ಥಾನ ನೀಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಕಾರ್ಯಕರ್ತರ ಭೇಟಿ, ಸಂಘಟನಾ ಪರ್ವ ನಡೆಯುತ್ತಿದೆ. ಅಲ್ಲದೆಮತಗಟ್ಟೆ ಸಮಿತಿ ರಚನೆ ಮಾಡುವುದು ಸೇರಿದಂತೆ ಸದಸ್ಯತ್ವ ಅಭಿಯಾನಕ್ಕೆ ವೇಗ ಕೊಡುವುದಕ್ಕೆ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಬಂದಿದ್ದೇನೆ ಎಂದು ತಿಳಿಸಿದರು.