ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮೆಡಗಿ, ಚೌಡೇಶ್ವರಾಳ, ಅಡ್ಡೊಡಗಿ ಹಾಗು ಇತರೆ ಸ್ಥಳಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 325 ಟಿಪ್ಪರ್ಗಳಷ್ಟು ಮರಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ನೇತೃತ್ವದಲ್ಲಿ ದಾಳಿ ಮಾಡಿ ಜಪ್ತಿ ಮಾಡಲಾಯಿತು.
ಜಪ್ತಿ ಮಾಡಿದ ಮರಳು ಅಂದಾಜು ಮೌಲ್ಯ ₹1 ಕೋಟಿಗೂ ಅಧಿಕ ಎಂದು ತಿಳಿದು ಬಂದಿದೆ. ಅಕ್ರಮ ಮರಳು ಸಂಗ್ರಹಿಸಿರುವವರ ಬಗ್ಗೆ ಇನ್ನೂ ಮಾಹಿತಿ ಸಂಗ್ರಹಿಸಬೇಕು. ತನಿಖೆ ನಂತರ ತಿಳಿದು ಬರಲಿದೆ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎಗ್ಗಿಲ್ಲದೆ ಅಕ್ರಮವಾಗಿ ಮರಳು ಮಾರಾಟ ಮತ್ತು ಸಂಗ್ರಹ ಮಾಡಲಾಗುತ್ತಿತ್ತು. ಎಸ್ಪಿ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.