<p><strong>ಯಾದಗಿರಿ:</strong> ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮೆಡಗಿ, ಚೌಡೇಶ್ವರಾಳ, ಅಡ್ಡೊಡಗಿ ಹಾಗು ಇತರೆ ಸ್ಥಳಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 325 ಟಿಪ್ಪರ್ಗಳಷ್ಟು ಮರಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ನೇತೃತ್ವದಲ್ಲಿ ದಾಳಿ ಮಾಡಿ ಜಪ್ತಿ ಮಾಡಲಾಯಿತು.</p>.<p>ಜಪ್ತಿ ಮಾಡಿದ ಮರಳು ಅಂದಾಜು ಮೌಲ್ಯ ₹1 ಕೋಟಿಗೂ ಅಧಿಕ ಎಂದು ತಿಳಿದು ಬಂದಿದೆ. ಅಕ್ರಮ ಮರಳು ಸಂಗ್ರಹಿಸಿರುವವರ ಬಗ್ಗೆ ಇನ್ನೂ ಮಾಹಿತಿ ಸಂಗ್ರಹಿಸಬೇಕು. ತನಿಖೆ ನಂತರ ತಿಳಿದು ಬರಲಿದೆ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಎಗ್ಗಿಲ್ಲದೆ ಅಕ್ರಮವಾಗಿ ಮರಳು ಮಾರಾಟ ಮತ್ತು ಸಂಗ್ರಹ ಮಾಡಲಾಗುತ್ತಿತ್ತು. ಎಸ್ಪಿ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.</p>.<p>ದಾಳಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್ ನಿಂಗಣ್ಣ ಬಿರಾದಾರ್,ಪೊಲೀಸ್ ಇನ್ಸ್ಪೆಕ್ಟರ್ಗಳಾದ ಸದಾಶಿವ ಎಸ್., ದೌಲತ್ ಎನ್.ಕೆ., ಎಸ್.ಎಂ.ಪಾಟೀಲ ಸಿಬ್ಬಂದಿಯಾದ ಶಶಿಕುಮಾರ್ ರಾಥೊಡ, ಮಲ್ಲಿಕಾರ್ಜುನ ಪೂಜಾರ ಪಾಲ್ಗೊಂಡಿದ್ದರು.</p>.<p>ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮೆಡಗಿ, ಚೌಡೇಶ್ವರಾಳ, ಅಡ್ಡೊಡಗಿ ಹಾಗು ಇತರೆ ಸ್ಥಳಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 325 ಟಿಪ್ಪರ್ಗಳಷ್ಟು ಮರಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ನೇತೃತ್ವದಲ್ಲಿ ದಾಳಿ ಮಾಡಿ ಜಪ್ತಿ ಮಾಡಲಾಯಿತು.</p>.<p>ಜಪ್ತಿ ಮಾಡಿದ ಮರಳು ಅಂದಾಜು ಮೌಲ್ಯ ₹1 ಕೋಟಿಗೂ ಅಧಿಕ ಎಂದು ತಿಳಿದು ಬಂದಿದೆ. ಅಕ್ರಮ ಮರಳು ಸಂಗ್ರಹಿಸಿರುವವರ ಬಗ್ಗೆ ಇನ್ನೂ ಮಾಹಿತಿ ಸಂಗ್ರಹಿಸಬೇಕು. ತನಿಖೆ ನಂತರ ತಿಳಿದು ಬರಲಿದೆ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಎಗ್ಗಿಲ್ಲದೆ ಅಕ್ರಮವಾಗಿ ಮರಳು ಮಾರಾಟ ಮತ್ತು ಸಂಗ್ರಹ ಮಾಡಲಾಗುತ್ತಿತ್ತು. ಎಸ್ಪಿ ನೇತೃತ್ವದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.</p>.<p>ದಾಳಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್ ನಿಂಗಣ್ಣ ಬಿರಾದಾರ್,ಪೊಲೀಸ್ ಇನ್ಸ್ಪೆಕ್ಟರ್ಗಳಾದ ಸದಾಶಿವ ಎಸ್., ದೌಲತ್ ಎನ್.ಕೆ., ಎಸ್.ಎಂ.ಪಾಟೀಲ ಸಿಬ್ಬಂದಿಯಾದ ಶಶಿಕುಮಾರ್ ರಾಥೊಡ, ಮಲ್ಲಿಕಾರ್ಜುನ ಪೂಜಾರ ಪಾಲ್ಗೊಂಡಿದ್ದರು.</p>.<p>ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>