ಗುರುಮಠಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಮರಳು ಅಕ್ರಮ ಗಾಂಜಾ ಮಾರಾಟ ಮಟ್ಕಾ ಬುಕಿಂಗ್ ಇಸ್ಪೀಟ್ನಂತ ಅಕ್ರಮ ಚಟುವಟಿಕೆಗಳು ಮಿತಿ ಮೀರಿವೆ. ಅಧಿಕಾರಿಗಳಿಗೆ ಗೊತ್ತಿದ್ದೂ ಸುಮ್ಮನಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ- ಶರಣಬಸಪ್ಪ ಎಲ್ಹೇರಿ ಕರವೇ ಅಧ್ಯಕ್ಷ
ಗಾಂಜಾ ಸೇವಿಸಿದ ಮಕ್ಕಳು ಈಚೆಗೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿಲ್ಲ. ತಂದೆ ತಾಯಿಗಳ ಗೋಳು ಹೇಳತೀರಾಗಿದೆ. ಕಾನೂನು ಅರಿವು ಮೂಡಿಸಿ ದಂಡ ವಿಧಿಸಿ. ಸರ್ಕಾರದ ಬೊಕ್ಕಸಕ್ಕೆ ಹಾನಿ ತಡೆಗಟ್ಟಿಸಂಜು ಅಳೆಗಾರ ಸಾಮಾಜಿಕ ಕಾರ್ಯಕರ್ತ
ಜಿಲ್ಲೆಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವವರು ಇಲ್ಲದಂತೆ ಆಗಿದೆ. ಇದೇ ರೀತಿ ಮುಂದುವರಿದರೆ ಪೊಲೀಸ್ ಸ್ಟೇಷನ್ ಮುತ್ತಿಗೆ ಹಾಕುತ್ತೇವೆನಾಗೇಶ ಗದ್ದಿಗೆ ಸಾಮಾಜಿಕ ಕಾರ್ಯಕರ್ತ
ಪೊಲೀಸ್ ಇಲಾಖೆಯ ನಿರ್ಲಕ್ಷ್ಯದಿಂದ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ದಂಧೆಗಳು ನಡೆಯುತ್ತಿವೆ. ಮರಳು ಅಕ್ರಮ ಸಾಗಾಟದ ಬಗ್ಗೆ ಮಟ್ಕಾ ಜೂಜಾಟದ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಪೊಲೀಸ್ ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಈ ಅಕ್ರಮ ಚಟುವಟಿಕೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆಮಲ್ಲು ಪೊಲೀಸ್ ಪಾಟೀಲ ವಡಗೇರಾ
ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಬಂದಂತೆಲ್ಲಾ ದಾಳಿ ಮಾಡಿ ಕ್ರಮ ವಹಿಸಲಾಗುತ್ತಿದೆ. ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆಜಿ.ಸಂಗೀತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.