<p>ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಮಾಧ್ಯಮದವರಿಗೆ ಜಿಲ್ಲಾ ಆಯುಷ್ ಕಚೇರಿಯಲ್ಲಿ ಮಂಗಳವಾರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.</p>.<p>ಈ ವೇಳೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಜೆ.ಗಾಳಿಯವರ್ ಮಾತನಾಡಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಔಷಧಿಗಳನ್ನು ಮೊದಲನೆ ಹಂತದಲ್ಲಿ ಪತ್ರಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕವಿರುವ ಅಧಿಕಾರಿಗಳಿಗೆ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಡಾ.ಪ್ರಕಾಶ್ ಎಚ್.ರಾಜಾಪುರ ಹೋಮಿಯೋಪಥಿ, ಡಾ.ಪ್ರಮೋದ್ ಕುಲಕರ್ಣಿ ಆಯುರ್ವೇದ, ಡಾ.ರಾಜೇಶ್ವರಿ ಗೋನಾಳಮಠ ಯುನಾನಿ ಔಷಧಿಗಳ ಬಗ್ಗೆ ಮಾಹಿತಿ ನೀಡಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ರಾಜರತ್ನ ಡಿ.ಕೆ., ಡಾ.ಸುನಂದಾ ಕುದರಿ, ಡಾ.ರಮೇಶ ಸಜ್ಜನ್, ಡಾ.ಪ್ರಮೀಳಾದೇವಿ, ರವಿಕುಮಾರ, ಮಹೇಶರೆಡ್ಡಿ, ವಿಶ್ವನಾಥ, ನಾಗರಾಜ ಇದ್ದರು. ಸಂಗಮೇಶ ಕೆಂಭಾವಿ ನಿರೂಪಿಸಿದರು.</p>.<p>***</p>.<p>ಕೊರೊನಾ ರೋಗಕ್ಕೆ ನಿಖರವಾದ ಔಷಧಿ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮಗಳೇ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ಸದ್ಯದ ಪರಿಹಾರ<br />– ಡಾ.ವಂದನಾ ಜೆ.ಗಾಳಿಯವರ್,ಜಿಲ್ಲಾ ಆಯುಷ್ ಅಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಮಾಧ್ಯಮದವರಿಗೆ ಜಿಲ್ಲಾ ಆಯುಷ್ ಕಚೇರಿಯಲ್ಲಿ ಮಂಗಳವಾರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.</p>.<p>ಈ ವೇಳೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಜೆ.ಗಾಳಿಯವರ್ ಮಾತನಾಡಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಔಷಧಿಗಳನ್ನು ಮೊದಲನೆ ಹಂತದಲ್ಲಿ ಪತ್ರಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕವಿರುವ ಅಧಿಕಾರಿಗಳಿಗೆ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಡಾ.ಪ್ರಕಾಶ್ ಎಚ್.ರಾಜಾಪುರ ಹೋಮಿಯೋಪಥಿ, ಡಾ.ಪ್ರಮೋದ್ ಕುಲಕರ್ಣಿ ಆಯುರ್ವೇದ, ಡಾ.ರಾಜೇಶ್ವರಿ ಗೋನಾಳಮಠ ಯುನಾನಿ ಔಷಧಿಗಳ ಬಗ್ಗೆ ಮಾಹಿತಿ ನೀಡಿದರು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ರಾಜರತ್ನ ಡಿ.ಕೆ., ಡಾ.ಸುನಂದಾ ಕುದರಿ, ಡಾ.ರಮೇಶ ಸಜ್ಜನ್, ಡಾ.ಪ್ರಮೀಳಾದೇವಿ, ರವಿಕುಮಾರ, ಮಹೇಶರೆಡ್ಡಿ, ವಿಶ್ವನಾಥ, ನಾಗರಾಜ ಇದ್ದರು. ಸಂಗಮೇಶ ಕೆಂಭಾವಿ ನಿರೂಪಿಸಿದರು.</p>.<p>***</p>.<p>ಕೊರೊನಾ ರೋಗಕ್ಕೆ ನಿಖರವಾದ ಔಷಧಿ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮಗಳೇ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ಸದ್ಯದ ಪರಿಹಾರ<br />– ಡಾ.ವಂದನಾ ಜೆ.ಗಾಳಿಯವರ್,ಜಿಲ್ಲಾ ಆಯುಷ್ ಅಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>