<p><strong>ಸುರಪುರ</strong>: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಕ್ರಾಂತಿಯನ್ನು ಬಿತ್ತಿದ ಕಲಬುರಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಶಿಕ್ಷಣದ ಜತೆಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆ ನೀಡುತ್ತಿರುವುದು ಅನನ್ಯ’ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ. ಸುರೇಶ ಸಜ್ಜನ ಹೇಳಿದರು.</p>.<p>ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಡಾ. ಶರಣಬಸವಪ್ಪ ಅಪ್ಪಾ ಸಭಾಮಂಟಪದ ಉದ್ಘಾಟನೆ, ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ-2022 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘2010ರಲ್ಲಿ ಆರಂಭವಾದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜು ಅನೇಕ ವಿದ್ಯಾರ್ಥಿಗಳ ಬದುಕು ಕಟ್ಟಿಕೊಟ್ಟಿದ್ದು ಇಂದು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ’ ಎಂದರು.</p>.<p>ಕಾರ್ಯದರ್ಶಿ ಶರಣಬಸವಪ್ಪ ನಿಷ್ಠಿ ಅವರು ಎಂಜಿನಿಯರಿಂಗ್ ಶಿಕ್ಷಣಕ್ಕಾಗಿ 12 ಎಕರೆಯ ₹25 ಕೋಟಿಗೂ ಹೆಚ್ಚು ಮೊತ್ತದ ಭೂಮಿಯನ್ನು ದಾನ ಕೊಟ್ಟಿರುತ್ತಾರೆ. ಸಂಸ್ಥೆಯ ಬೆಳವಣಿಗೆ ಅವರು ಅಪಾರವಾಗಿ ಶ್ರಮಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಕಾರ್ಯದರ್ಶಿ ಶರಣಬಸವಪ್ಪ ನಿಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಬಸವರಾಜ ಜಮದ್ರಖಾನಿ ಮಾತನಾಡಿದರು. ಬಸವರಾಜ ನಿಷ್ಠಿ ದೇಶಮುಖ, ಜನಾರ್ಧನ ಪಾಣಿಭಾತೆ, ಪ್ರಾಚಾರ್ಯ ಡಾ. ಶರಣಬಸಪ್ಪ ಸಾಲಿ, ಅಶೋಕ ಪಾಟೀಲ, ಶರಣಗೌಡ ಪಾಟೀಲ ವೇದಿಕೆಯಲ್ಲಿದ್ದರು.</p>.<p>ವಿದ್ಯಾರ್ಥಿಗಳು ಸಿದ್ದಪಡಿಸಿದ ವೆಬ್ಸೈಟ್ ಲೋಕಾರ್ಪಣೆ ಮಾಡಲಾಯಿತು. ಕಾಲೇಜಿನಲ್ಲಿ ಕಲಿತು ಸಾಧನೆಗೈದ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೀರಭದ್ರಪ್ಪ ನಿಷ್ಠಿ, ಬಸವರಾಜಪ್ಪ ಅಪ್ಪಾ, ನೀಲಮ್ಮ ತಾಯಿ ನಿಷ್ಠಿರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.</p>.<p>ಪ್ರೊ. ಮೋಹನರೆಡ್ಡಿ ದೇಸಾಯಿ ನಿರೂಪಿಸಿದರು. ಪ್ರೊ. ಆನಂದ ಬಿರಾದಾರ ಸ್ವಾಗತಿಸಿದರು. ಪ್ರೊ. ನಾನಾಗೌಡ ದೇಸಾಯಿ<br />ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಕ್ರಾಂತಿಯನ್ನು ಬಿತ್ತಿದ ಕಲಬುರಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಶಿಕ್ಷಣದ ಜತೆಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆ ನೀಡುತ್ತಿರುವುದು ಅನನ್ಯ’ ಎಂದು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಡಾ. ಸುರೇಶ ಸಜ್ಜನ ಹೇಳಿದರು.</p>.<p>ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಡಾ. ಶರಣಬಸವಪ್ಪ ಅಪ್ಪಾ ಸಭಾಮಂಟಪದ ಉದ್ಘಾಟನೆ, ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ-2022 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘2010ರಲ್ಲಿ ಆರಂಭವಾದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜು ಅನೇಕ ವಿದ್ಯಾರ್ಥಿಗಳ ಬದುಕು ಕಟ್ಟಿಕೊಟ್ಟಿದ್ದು ಇಂದು ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ’ ಎಂದರು.</p>.<p>ಕಾರ್ಯದರ್ಶಿ ಶರಣಬಸವಪ್ಪ ನಿಷ್ಠಿ ಅವರು ಎಂಜಿನಿಯರಿಂಗ್ ಶಿಕ್ಷಣಕ್ಕಾಗಿ 12 ಎಕರೆಯ ₹25 ಕೋಟಿಗೂ ಹೆಚ್ಚು ಮೊತ್ತದ ಭೂಮಿಯನ್ನು ದಾನ ಕೊಟ್ಟಿರುತ್ತಾರೆ. ಸಂಸ್ಥೆಯ ಬೆಳವಣಿಗೆ ಅವರು ಅಪಾರವಾಗಿ ಶ್ರಮಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಕಾಲೇಜಿನ ಕಾರ್ಯದರ್ಶಿ ಶರಣಬಸವಪ್ಪ ನಿಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಬಸವರಾಜ ಜಮದ್ರಖಾನಿ ಮಾತನಾಡಿದರು. ಬಸವರಾಜ ನಿಷ್ಠಿ ದೇಶಮುಖ, ಜನಾರ್ಧನ ಪಾಣಿಭಾತೆ, ಪ್ರಾಚಾರ್ಯ ಡಾ. ಶರಣಬಸಪ್ಪ ಸಾಲಿ, ಅಶೋಕ ಪಾಟೀಲ, ಶರಣಗೌಡ ಪಾಟೀಲ ವೇದಿಕೆಯಲ್ಲಿದ್ದರು.</p>.<p>ವಿದ್ಯಾರ್ಥಿಗಳು ಸಿದ್ದಪಡಿಸಿದ ವೆಬ್ಸೈಟ್ ಲೋಕಾರ್ಪಣೆ ಮಾಡಲಾಯಿತು. ಕಾಲೇಜಿನಲ್ಲಿ ಕಲಿತು ಸಾಧನೆಗೈದ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೀರಭದ್ರಪ್ಪ ನಿಷ್ಠಿ, ಬಸವರಾಜಪ್ಪ ಅಪ್ಪಾ, ನೀಲಮ್ಮ ತಾಯಿ ನಿಷ್ಠಿರವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.</p>.<p>ಪ್ರೊ. ಮೋಹನರೆಡ್ಡಿ ದೇಸಾಯಿ ನಿರೂಪಿಸಿದರು. ಪ್ರೊ. ಆನಂದ ಬಿರಾದಾರ ಸ್ವಾಗತಿಸಿದರು. ಪ್ರೊ. ನಾನಾಗೌಡ ದೇಸಾಯಿ<br />ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>