<p><strong>ಯಾದಗಿರಿ:</strong> ನಗರದ ನ್ಯೂ ಕನ್ನಡ ಶಾಲೆಯ ಹತ್ತಿರ ಹಾಗೂ ಅಂಬೇಡ್ಕರ್ ಚೌಕ ಹತ್ತಿರ ಕೆಕೆಆರ್ಡಿಬಿಯ 2023-24ನೇ ಸಾಲಿನಲ್ಲಿ ಯೋಜನೆಯಡಿ ಅಂದಾಜು ಮೊತ್ತ (ತಲಾ ಒಂದಕ್ಕೆ) ₹15 ಲಕ್ಷಗಳಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಂಗಳವಾರ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಉದ್ಘಾಟಿಸಿದರು.</p>.<p>ಈ ವೇಳೆ ಮಾತನಾಡಿ ಅವರು, ‘ಹಿಂದುಳಿದ ಭಾಗದ ಸಮಗ್ರ ಅಭಿವೃದ್ಧಿಗೆ ಅಂದಿನ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಹಾಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡೀ ಸಂಸತ್ತಿನ ಮನವೊಲಿಸಿ, 371(ಜೆ) ಕಲಂ ಜಾರಿ ಮಾಡುವ ಮೂಲಕ ಕೆಕೆಆರ್ಡಿಬಿಗೆ ಪ್ರತಿ ₹5000 ಅನುದಾನ ಬರುವಂತೆ ಮಾಡಿದ್ದಾರೆ’ ಎಂದರು.</p>.<p>‘ಅದರ ಫಲವಾಗಿ ಮಂಡಳಿಯಿಂದ ಈ ಭಾಗದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ದೊರೆಯುತ್ತಿದೆ. ಹೀಗಾಗಿ ಈ ಭಾಗದ ಶಾಸಕರಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅದರ ಫಲವಾಗಿ ರಸ್ತೆ, ನೀರು, ಆರೋಗ್ಯ, ಶಿಕ್ಷಣ ಸೇರಿದಂತೆಯೇ ಮೂಲಭೂತ ಸೌಲಭ್ಯಗಳು ನೀಡಲಾಗುತ್ತಿದೆ’ ಎಂದು ಶಾಸಕರು ವಿವರಿಸಿದರು.</p>.<p>‘ನಗರದಲ್ಲಿ ಕೆಟ್ಟಿರುವ ಆರ್ಒ ಪ್ಲಾಂಟ್ಗಳ ದುರಸ್ತಿಗೂ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ನಗರಸಭೆ ಸದಸ್ಯರಾದ ವಿಜಯಲಕ್ಷ್ಮೀ ಕೃಷ್ಟ ನಾನೇಕ, ಮಹೇಶ ಕುರಕುಂಬಳ, ಗೋಪಾಲ ಗಿರಿಯಪ್ಪನೋರ್, ಶಿವಕುಮಾರ ಕರದಳ್ಳಿ, ಕಾರ್ಯಪಾಲಕ ಎಂಜಿನಿಯರ್ ಧನಂಜಯ್ಯ ಆರ್., ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಜ ಹುಡೇದ, ಸೂಗುರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರದ ನ್ಯೂ ಕನ್ನಡ ಶಾಲೆಯ ಹತ್ತಿರ ಹಾಗೂ ಅಂಬೇಡ್ಕರ್ ಚೌಕ ಹತ್ತಿರ ಕೆಕೆಆರ್ಡಿಬಿಯ 2023-24ನೇ ಸಾಲಿನಲ್ಲಿ ಯೋಜನೆಯಡಿ ಅಂದಾಜು ಮೊತ್ತ (ತಲಾ ಒಂದಕ್ಕೆ) ₹15 ಲಕ್ಷಗಳಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಂಗಳವಾರ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಉದ್ಘಾಟಿಸಿದರು.</p>.<p>ಈ ವೇಳೆ ಮಾತನಾಡಿ ಅವರು, ‘ಹಿಂದುಳಿದ ಭಾಗದ ಸಮಗ್ರ ಅಭಿವೃದ್ಧಿಗೆ ಅಂದಿನ ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಹಾಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಡೀ ಸಂಸತ್ತಿನ ಮನವೊಲಿಸಿ, 371(ಜೆ) ಕಲಂ ಜಾರಿ ಮಾಡುವ ಮೂಲಕ ಕೆಕೆಆರ್ಡಿಬಿಗೆ ಪ್ರತಿ ₹5000 ಅನುದಾನ ಬರುವಂತೆ ಮಾಡಿದ್ದಾರೆ’ ಎಂದರು.</p>.<p>‘ಅದರ ಫಲವಾಗಿ ಮಂಡಳಿಯಿಂದ ಈ ಭಾಗದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ದೊರೆಯುತ್ತಿದೆ. ಹೀಗಾಗಿ ಈ ಭಾಗದ ಶಾಸಕರಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅದರ ಫಲವಾಗಿ ರಸ್ತೆ, ನೀರು, ಆರೋಗ್ಯ, ಶಿಕ್ಷಣ ಸೇರಿದಂತೆಯೇ ಮೂಲಭೂತ ಸೌಲಭ್ಯಗಳು ನೀಡಲಾಗುತ್ತಿದೆ’ ಎಂದು ಶಾಸಕರು ವಿವರಿಸಿದರು.</p>.<p>‘ನಗರದಲ್ಲಿ ಕೆಟ್ಟಿರುವ ಆರ್ಒ ಪ್ಲಾಂಟ್ಗಳ ದುರಸ್ತಿಗೂ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ನಗರಸಭೆ ಸದಸ್ಯರಾದ ವಿಜಯಲಕ್ಷ್ಮೀ ಕೃಷ್ಟ ನಾನೇಕ, ಮಹೇಶ ಕುರಕುಂಬಳ, ಗೋಪಾಲ ಗಿರಿಯಪ್ಪನೋರ್, ಶಿವಕುಮಾರ ಕರದಳ್ಳಿ, ಕಾರ್ಯಪಾಲಕ ಎಂಜಿನಿಯರ್ ಧನಂಜಯ್ಯ ಆರ್., ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಜ ಹುಡೇದ, ಸೂಗುರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>