ಸೋಮವಾರ 45,800 ಕ್ಯುಸೆಕ್ ನೀರು ಒಳಹರಿವು ಇದ್ದು ಜಲಾಶಯದ 7 ಕ್ರಸ್ಟ್ಗೇಟ್ ಮೂಲಕ 45,760 ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇರುವುದರಿಂದಾಗಿ ನದಿ ಪಾತ್ರದಲ್ಲಿರುವ ಹಳ್ಳಿಗಳ ಜನರು ಎಚ್ಚರಿಕೆಯಿಂದ ಇರಬೇಕು. ನದಿಗೆ ಇಳಿಯಬಾರದು ಎಂದು ಡ್ಯಾಂ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ತಿಳಿಸಿದರು.