‘ಶ್ರೀರಾಮುಲು ನಮ್ಮ ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ಮಾಡಿಸಿ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ. ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಅವರ ಸವಾಲನ್ನು ಸ್ವೀಕರಿಸಿದ್ದೇನೆ. ಇದೇ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಸ್ಪರ್ಧಿಸಿ, ಶ್ರೀರಾಮುಲು ಅವರನ್ನು ಸೋಲಿಸಿ, ಬಳ್ಳಾರಿಗೆ ವಾಪಸ್ ಕಳಿಸುತ್ತೇನೆ’ ಎಂದು ಪ್ರತಿ ಸವಾಲು ಹಾಕಿದರು.