<p><strong>ಹುಣಸಗಿ: </strong>ತಾಲ್ಲೂಕಿನ ಕನ್ನೇಳ್ಳಿ ಗ್ರಾಮದಲ್ಲಿ ಮನೆಯಲ್ಲಿಯೇ ಪ್ರತ್ಯೇಕ ವಾಸವಾಗಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು, ಅವರ ಮನೆಗೆ ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ ಭೇಟಿ ನೀಡಿ ಜಾಗೃತಿ ಮೂಡಿಸಿದರು.</p>.<p>ಸೋಂಕಿತ ವ್ಯಕ್ತಿಗಳು ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮನೆಯವರು ಜಾಗ್ರತೆ ವಹಿಸಬೇಕು. ಆರೋಗ್ಯದಲ್ಲಿ ಉಸಿರಾಟದಲ್ಲಿ ಏರುಪೇರಾದರೆ ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ಆಗಮಿಸಬೇಕು ಎಂದು ತಿಳಿಸಿದರು.</p>.<p>ಪರಶುರಾಂ (30) ಎಂಬುವರೇ ಮೃತಪಟ್ಟಿದ್ದು, ಅವರ ಮನೆ ಹಾಗೂ ಮನೆಯ ಸುತ್ತಮುತ್ತಲಿರುವ ಮನೆಗಳ ಜನರು, ಪ್ರಾಥಮಿಕ ಸಂಪರ್ಕದಲ್ಲಿರುವವರು ಕಡ್ಡಾ<br />ಯವಾಗಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಿದರು.</p>.<p>ಅಲ್ಲದೇ, ಈಗಾಗಲೇ ಕೋವಿಡ್ 2ನೇ ಅಲೆ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಅನಗತ್ಯ ಹೊರಗಡೆ ಸಂಚಾರ ಮಾಡದೆ ಮನೆಯಲ್ಲಿಯೇ ಇರಿ. ಸೋಂಕಿತ ವ್ಯಕ್ತಿಗಳು ಮನೆಯಿಂದ ಹೊರಗೆ ಸಂಚರಿಸುತ್ತಿದ್ದಾರೆ ಎಂಬ ದೂರುಗಳು ಬರುತ್ತಿದ್ದು, ಅಂತವರು ಹೊರ ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವಣ್ಣಯ್ಯ ಉಮಚಗಿಮಠ ಮಾತನಾಡಿ, ಈಗಾಗಲೇ ಕನ್ನೇಳ್ಳಿ ಗ್ರಾಮದಲ್ಲಿ ಎಲ್ಲೆಡೆ ಸೋಂಕು ನಿವಾರಕ ದ್ರಾವಣ ಸಿಂಪರಣೆ ಮಾಡಲಾಗಿದ್ದು, ಸೋಂಕಿತ ವ್ಯಕ್ತಿಗಳು ಇರುವ ಮನೆಗಳ ಬಳಿ ಇನ್ನೋಮ್ಮೆ ಮತ್ತೆ ಸಿಂಪರಣೆ ಮಾಡಲು ಕ್ರಮ ಕೈಗೊಳ್ಳುವದಾಗಿ ಹೇಳಿದರು.</p>.<p>ಕನ್ನೇಳ್ಳಿ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, ಬಹುತೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ: </strong>ತಾಲ್ಲೂಕಿನ ಕನ್ನೇಳ್ಳಿ ಗ್ರಾಮದಲ್ಲಿ ಮನೆಯಲ್ಲಿಯೇ ಪ್ರತ್ಯೇಕ ವಾಸವಾಗಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು, ಅವರ ಮನೆಗೆ ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ ಭೇಟಿ ನೀಡಿ ಜಾಗೃತಿ ಮೂಡಿಸಿದರು.</p>.<p>ಸೋಂಕಿತ ವ್ಯಕ್ತಿಗಳು ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮನೆಯವರು ಜಾಗ್ರತೆ ವಹಿಸಬೇಕು. ಆರೋಗ್ಯದಲ್ಲಿ ಉಸಿರಾಟದಲ್ಲಿ ಏರುಪೇರಾದರೆ ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ಆಗಮಿಸಬೇಕು ಎಂದು ತಿಳಿಸಿದರು.</p>.<p>ಪರಶುರಾಂ (30) ಎಂಬುವರೇ ಮೃತಪಟ್ಟಿದ್ದು, ಅವರ ಮನೆ ಹಾಗೂ ಮನೆಯ ಸುತ್ತಮುತ್ತಲಿರುವ ಮನೆಗಳ ಜನರು, ಪ್ರಾಥಮಿಕ ಸಂಪರ್ಕದಲ್ಲಿರುವವರು ಕಡ್ಡಾ<br />ಯವಾಗಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಿದರು.</p>.<p>ಅಲ್ಲದೇ, ಈಗಾಗಲೇ ಕೋವಿಡ್ 2ನೇ ಅಲೆ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಅನಗತ್ಯ ಹೊರಗಡೆ ಸಂಚಾರ ಮಾಡದೆ ಮನೆಯಲ್ಲಿಯೇ ಇರಿ. ಸೋಂಕಿತ ವ್ಯಕ್ತಿಗಳು ಮನೆಯಿಂದ ಹೊರಗೆ ಸಂಚರಿಸುತ್ತಿದ್ದಾರೆ ಎಂಬ ದೂರುಗಳು ಬರುತ್ತಿದ್ದು, ಅಂತವರು ಹೊರ ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವಣ್ಣಯ್ಯ ಉಮಚಗಿಮಠ ಮಾತನಾಡಿ, ಈಗಾಗಲೇ ಕನ್ನೇಳ್ಳಿ ಗ್ರಾಮದಲ್ಲಿ ಎಲ್ಲೆಡೆ ಸೋಂಕು ನಿವಾರಕ ದ್ರಾವಣ ಸಿಂಪರಣೆ ಮಾಡಲಾಗಿದ್ದು, ಸೋಂಕಿತ ವ್ಯಕ್ತಿಗಳು ಇರುವ ಮನೆಗಳ ಬಳಿ ಇನ್ನೋಮ್ಮೆ ಮತ್ತೆ ಸಿಂಪರಣೆ ಮಾಡಲು ಕ್ರಮ ಕೈಗೊಳ್ಳುವದಾಗಿ ಹೇಳಿದರು.</p>.<p>ಕನ್ನೇಳ್ಳಿ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, ಬಹುತೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>