<p><strong>ಕಕ್ಕೇರಾ:</strong> ಪಟ್ಟಣದ ಸಮೀಪದ ಹುಣಸಿಹೊಳೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನವನ್ನು ಆಧರಿಸಿದ ಜೀಕನ್ನಡ ವಾಹಿನಿಯ ಧಾರಾವಾಹಿ ‘ಮಹಾನಾಯಕ ಡಾ.ಬಿಆರ್.ಅಂಬೇಡ್ಕರ್’ ಚಿತ್ರಕ್ಕೆ ದಲಿತ ಸೇನೆ ಗ್ರಾಮ ಘಟಕದಿಂದ ಪೂಜೆ ಸಲ್ಲಿಸಲಾಯಿತು.</p>.<p>ದಲಿತ ಸೇನೆ ಅಧ್ಯಕ್ಷ ನಿಂಗಪ್ಪ ಕಾಂಬ್ಳೆ ಮಾತನಾಡಿ, ಅಂಬೇಡ್ಕರ್ ಅವರು ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಅಖಂಡ ಭಾರತದಲ್ಲಿ ಮರೆಯಲಾಗದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲ. ಧಾರಾವಾಹಿಯು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.</p>.<p>ಅಂಬೇಡ್ಕರ್ ಅವರ ಜೀವನ ಆಧಾರಿತ ಧಾರವಾಹಿ ಸರ್ವರಿಗೂ ಸ್ಫೂರ್ತಿ ತುಂಬಲಿದೆ. ಅದರಲ್ಲಿಯು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಅವರಂತೆ ಇಂದಿನ ಮಕ್ಕಳು ಶಿಕ್ಷಣದಲ್ಲಿ ಮುಂದೆ ಬರಬೇಕಾಗಿದೆ ಎಂದರು.</p>.<p>ಕೆಲವರು ಧಾರಾವಾಹಿ ನಿಲ್ಲಿಸಲು ಬೆದರಿಕೆ ಹಾಕುತ್ತಿದ್ದಾರೆ. ಇಂಥವರಿಗೆ ಹೆದರದೆ ಧಾರಾವಾಹಿಯನ್ನು ಮುಂದುವರಿಸಬೇಕು.ಜೀಕನ್ನಡಕ್ಕೆ ನಮ್ಮೆಲ್ಲರ ಬೆಂಬಲ ಇದೆ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಮರಲಿಂಗಪ್ಪ ಕಟ್ಟಿಮನಿ, ಮಾನಪ್ಪ ಕಟ್ಟಿಮನಿ, ಬಸವರಾಜ ಕಾಂಬ್ಳೆ, ಮಾರುತಿ ಹೊಸಮನಿ, ಭೀಮರಾಯ ದೊಡ್ಡಮನಿ, ಪ್ರಕಾಶ ಬಡಿಗೇರ, ಮಾನಪ್ಪ ಕಾಂಬ್ಳೆ, ಗ್ಯಾನಪ್ಪ ಕಾಂಬ್ಳೆ, ಗಂಗಣ್ಣ ಗೌಂಡಿ, ಸೇರಿದಂತೆ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ:</strong> ಪಟ್ಟಣದ ಸಮೀಪದ ಹುಣಸಿಹೊಳೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನವನ್ನು ಆಧರಿಸಿದ ಜೀಕನ್ನಡ ವಾಹಿನಿಯ ಧಾರಾವಾಹಿ ‘ಮಹಾನಾಯಕ ಡಾ.ಬಿಆರ್.ಅಂಬೇಡ್ಕರ್’ ಚಿತ್ರಕ್ಕೆ ದಲಿತ ಸೇನೆ ಗ್ರಾಮ ಘಟಕದಿಂದ ಪೂಜೆ ಸಲ್ಲಿಸಲಾಯಿತು.</p>.<p>ದಲಿತ ಸೇನೆ ಅಧ್ಯಕ್ಷ ನಿಂಗಪ್ಪ ಕಾಂಬ್ಳೆ ಮಾತನಾಡಿ, ಅಂಬೇಡ್ಕರ್ ಅವರು ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಅಖಂಡ ಭಾರತದಲ್ಲಿ ಮರೆಯಲಾಗದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲ. ಧಾರಾವಾಹಿಯು ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.</p>.<p>ಅಂಬೇಡ್ಕರ್ ಅವರ ಜೀವನ ಆಧಾರಿತ ಧಾರವಾಹಿ ಸರ್ವರಿಗೂ ಸ್ಫೂರ್ತಿ ತುಂಬಲಿದೆ. ಅದರಲ್ಲಿಯು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಅವರಂತೆ ಇಂದಿನ ಮಕ್ಕಳು ಶಿಕ್ಷಣದಲ್ಲಿ ಮುಂದೆ ಬರಬೇಕಾಗಿದೆ ಎಂದರು.</p>.<p>ಕೆಲವರು ಧಾರಾವಾಹಿ ನಿಲ್ಲಿಸಲು ಬೆದರಿಕೆ ಹಾಕುತ್ತಿದ್ದಾರೆ. ಇಂಥವರಿಗೆ ಹೆದರದೆ ಧಾರಾವಾಹಿಯನ್ನು ಮುಂದುವರಿಸಬೇಕು.ಜೀಕನ್ನಡಕ್ಕೆ ನಮ್ಮೆಲ್ಲರ ಬೆಂಬಲ ಇದೆ ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಮರಲಿಂಗಪ್ಪ ಕಟ್ಟಿಮನಿ, ಮಾನಪ್ಪ ಕಟ್ಟಿಮನಿ, ಬಸವರಾಜ ಕಾಂಬ್ಳೆ, ಮಾರುತಿ ಹೊಸಮನಿ, ಭೀಮರಾಯ ದೊಡ್ಡಮನಿ, ಪ್ರಕಾಶ ಬಡಿಗೇರ, ಮಾನಪ್ಪ ಕಾಂಬ್ಳೆ, ಗ್ಯಾನಪ್ಪ ಕಾಂಬ್ಳೆ, ಗಂಗಣ್ಣ ಗೌಂಡಿ, ಸೇರಿದಂತೆ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>