<p>ಯಾದಗಿರಿ: ನಗರದ ಹೃಯದ ಭಾಗದಲ್ಲಿರುವ ಲುಂಬಿನ ವನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಭೇಟಿ ನೀಡಿ ಪರಿಶೀಲಿಸಿದರು. ಲುಂಬಿನಿ ವನದಲ್ಲಿ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸೆಪ್ಟೆಂಬರ್ 22ರಂದು ‘ಸುಂದರ ಲುಂಬಿನಿ ಈಗ ಅಧ್ವಾನ’ ಎಂಬ ವಿಶೇಷ ವರದಿಯನ್ನು ‘ಪ್ರಜಾವಾಣಿ’ ಪ್ರಕಟಿಸಿತ್ತು. ಅಲ್ಲಿನ ಅವ್ಯವಸ್ಥೆ ಕುರಿತು ಬೆಳಕು ಚೆಲ್ಲಿತ್ತು. ಸ್ವಚ್ಛತೆ ಇಲ್ಲದಿರುವ ಕುರಿತು ಪ್ರಸ್ತಾವಿಸಲಾಗಿತ್ತು.<br /><br />‘ಈ ಸಲ ಹೆಚ್ಚಿನ ಮಳೆಯಾಗಿದ್ದರಿಂದ ವನದ ಒಳಗಡೆ ನೀರು ನಿಂತಿದೆ. ಹೀಗಾಗಿ ಸ್ವಚ್ಛತೆ ಬಗ್ಗೆ ಗಮನಹರಿಸಿ. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಉದ್ಯಾನವನಕ್ಕೆ ಬರುವ ಸಾರ್ವಜನಿಕರಿಗೆ ಮಾಸ್ಕ್, ಅಂತರ ಕಾಪಾಡಿಕೊಳ್ಳಲು ತಿಳಿಸಬೇಕು. ವನದ ಒಳಗಡೆ ಚರಂಡಿ ನೀರು ಬರುವುದನ್ನು ತಡೆಯಲು ಪರಿಹಾರ ಹುಡಬೇಕು. ಉದ್ಯಾನ ಸುತ್ತಲೂ ಚರಂಡಿಗಳ ಸರ್ವೆ ಮಾಡಿ ವರದಿ ಸಲ್ಲಿಸಿ, ಸಣ್ಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ’ ಎಂದು ಸೂಚಿಸಿದರು.</p>.<p>‘ಉದ್ಯಾನದಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಎತ್ತರಗೊಳಿಸಿ ನೀರು ನಿಲ್ಲದಂತೆ ಮಾಡಬೇಕು. ವನದ ಸುತ್ತಲೂ ಕಲ್ಲು, ಮಣ್ಣು, ಕಸ, ತ್ಯಾಜ್ಯ ಹಾಕುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಹೇಳಿದರು.</p>.<p>ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಭೀಮರಾಯ ಮಸಾಲಿ, ನಗರಸಭೆ ಪ್ರಭಾರಿ ಪೌರಾಯುಕ್ತ ಬಕ್ಕಪ್ಪ ಹೊಸಮನಿ, ಕೆಆರ್ಐಡಿಎಲ್ನ ಹೊನ್ನಪ್ಪ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಕಿರಣ ಸೇರಿದಂತೆ ಸಂಬಂಧಪಪಟ್ಟ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ನಗರದ ಹೃಯದ ಭಾಗದಲ್ಲಿರುವ ಲುಂಬಿನ ವನಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಭೇಟಿ ನೀಡಿ ಪರಿಶೀಲಿಸಿದರು. ಲುಂಬಿನಿ ವನದಲ್ಲಿ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸೆಪ್ಟೆಂಬರ್ 22ರಂದು ‘ಸುಂದರ ಲುಂಬಿನಿ ಈಗ ಅಧ್ವಾನ’ ಎಂಬ ವಿಶೇಷ ವರದಿಯನ್ನು ‘ಪ್ರಜಾವಾಣಿ’ ಪ್ರಕಟಿಸಿತ್ತು. ಅಲ್ಲಿನ ಅವ್ಯವಸ್ಥೆ ಕುರಿತು ಬೆಳಕು ಚೆಲ್ಲಿತ್ತು. ಸ್ವಚ್ಛತೆ ಇಲ್ಲದಿರುವ ಕುರಿತು ಪ್ರಸ್ತಾವಿಸಲಾಗಿತ್ತು.<br /><br />‘ಈ ಸಲ ಹೆಚ್ಚಿನ ಮಳೆಯಾಗಿದ್ದರಿಂದ ವನದ ಒಳಗಡೆ ನೀರು ನಿಂತಿದೆ. ಹೀಗಾಗಿ ಸ್ವಚ್ಛತೆ ಬಗ್ಗೆ ಗಮನಹರಿಸಿ. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಉದ್ಯಾನವನಕ್ಕೆ ಬರುವ ಸಾರ್ವಜನಿಕರಿಗೆ ಮಾಸ್ಕ್, ಅಂತರ ಕಾಪಾಡಿಕೊಳ್ಳಲು ತಿಳಿಸಬೇಕು. ವನದ ಒಳಗಡೆ ಚರಂಡಿ ನೀರು ಬರುವುದನ್ನು ತಡೆಯಲು ಪರಿಹಾರ ಹುಡಬೇಕು. ಉದ್ಯಾನ ಸುತ್ತಲೂ ಚರಂಡಿಗಳ ಸರ್ವೆ ಮಾಡಿ ವರದಿ ಸಲ್ಲಿಸಿ, ಸಣ್ಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ’ ಎಂದು ಸೂಚಿಸಿದರು.</p>.<p>‘ಉದ್ಯಾನದಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಎತ್ತರಗೊಳಿಸಿ ನೀರು ನಿಲ್ಲದಂತೆ ಮಾಡಬೇಕು. ವನದ ಸುತ್ತಲೂ ಕಲ್ಲು, ಮಣ್ಣು, ಕಸ, ತ್ಯಾಜ್ಯ ಹಾಕುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಹೇಳಿದರು.</p>.<p>ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ಭೀಮರಾಯ ಮಸಾಲಿ, ನಗರಸಭೆ ಪ್ರಭಾರಿ ಪೌರಾಯುಕ್ತ ಬಕ್ಕಪ್ಪ ಹೊಸಮನಿ, ಕೆಆರ್ಐಡಿಎಲ್ನ ಹೊನ್ನಪ್ಪ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಕಿರಣ ಸೇರಿದಂತೆ ಸಂಬಂಧಪಪಟ್ಟ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>