ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಿಎಂ ಅವರು ತಮ್ಮ ಮಗನನ್ನು ನಿಲ್ಲಿಸಲು ಮುಂದಾಗಿದ್ದಾರೆ. ಹೀಗಾಗಿಯೇ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಆದರೆ, ಸಂಸದ ಪ್ರತಾಪ್ ಸಿಂಹ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿಯೇ ಸುಳ್ಳು ರಾಜಕೀಯ ಮಾಡುತ್ತಿದ್ದಾರೆ. ಇವರಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.