<p><strong>ಸುರಪುರ:</strong> ‘ಪೊಲೀಸ್ ಇಲಾಖೆ ಇದುವರೆಗೆ ಪ್ರತಿಕ್ರಿಯೆ ಸೇವೆಯನ್ನು ಮಾತ್ರ ಒದಗಿಸುತ್ತಾ ಬಂದಿದೆ. ಆದರೆ, ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ಇಲಾಖೆ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಮನೆಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಜಾರಿಗೊಳಿಸಿದೆ. ಪೊಲೀಸ್ ಸೇವೆಯನ್ನು ಸಕ್ರಿಯ ಸೇವೆಯನ್ನಾಗಿ ಪರಿವರ್ತಿಸುವುದು ಈ ಕಾರ್ಯಕ್ರಮದ ಉದ್ದೇಶ’ ಎಂದು ಡಿವೈಎಸ್ಪಿ ಜಾವೇದ್ ಇನಾಮದಾರ ತಿಳಿಸಿದರು.</p>.<p>ನಗರದ ಪೊಲೀಸ್ ಠಾಣೆಯಲ್ಲಿ ಶನಿವಾರ ಏರ್ಪಡಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬೀಟ್ ಪೊಲೀಸರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಆ ಕುಟುಂಬದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಬೇಕು. ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಕುಟುಂಬದವರಿಂದ ಲಿಖಿತವಾಗಿ ಅಥವಾ ಮೌಖಿಕವಾಗಿ ದೂರು ಪಡೆಯಬೇಕು. ಸಾಧ್ಯವಾದಷ್ಟು ಅಲ್ಲಿಯೇ ಪರಿಹಾರ ಸೂಚಿಸಬೇಕು. ಗಂಭೀರ ವಿಷಯಗಳಿದ್ದಲ್ಲಿ ಮೇಲಧಿಕಾರಿ ಗಮನಕ್ಕೆ ತರಬೇಕು’ ಎಂದು ತಿಳಿಸಿದರು.</p>.<p>‘ಗ್ರಾಮದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪೊಲೀಸ್ ಠಾಣೆ, ವೃತ್ತ ಕಚೇರಿ, ಉಪ ವಿಭಾಗ, ವೃತ್ತ ನಿರೀಕ್ಷಕರ ದೂರವಾಣಿ, ನಿಯಂತ್ರಣ ಕೋಣೆ ಸಂಖ್ಯೆ ಸೇರಿದಂತೆ ಅಧಿಕಾರಿಗಳ ದೂರವಾಣಿ ಸಂಖ್ಯೆ ನಮೂದಿಸಬೇಕು. ಜನಸ್ನೇಹಿಯಾಗಿ ವರ್ತಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಮಹಿಳೆಯರ, ಮಕ್ಕಳ ಸುರಕ್ಷತೆ, ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಭಿಕ್ಷಾಟನೆ ಸೇರಿದಂತೆ ಪ್ರಚಲಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಸಂಘ, ಸಂಸ್ಥೆ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿ ಹೇಳಬೇಕು. ಭದ್ರತಾ ಹಿತದೃಷ್ಟಿಯಿಂದ ಆಯಾ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಬೇಕು’ ಎಂದು ತಿಳಿಸಿದರು.</p>.<p>ಇನ್ಸ್ಪೆಕ್ಟರ್ ಉಮೇಶ, ಶಹಾಪುರ ಇನ್ಸ್ಪೆಕ್ಟರ್ ಮಹಾಂತೇಶ, ಪಿಎಸ್ಐಗಳಾದ ಶರಣಪ್ಪ ಹವಾಲ್ದಾರ್, ಕೃಷ್ಣ ಸುಬೇದಾರ, ಸಿದ್ದಣ್ಣ, ಶಿವರಾಜ ಪಾಟೀಲ, ಪಿಎಸ್ಐ ಶರಣಗೌಡ, ರಾಜಶೇಖರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಪೊಲೀಸ್ ಇಲಾಖೆ ಇದುವರೆಗೆ ಪ್ರತಿಕ್ರಿಯೆ ಸೇವೆಯನ್ನು ಮಾತ್ರ ಒದಗಿಸುತ್ತಾ ಬಂದಿದೆ. ಆದರೆ, ಸರ್ಕಾರ ಒಂದು ಹೆಜ್ಜೆ ಮುಂದೆ ಹೋಗಿ ಇಲಾಖೆ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಮನೆಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಜಾರಿಗೊಳಿಸಿದೆ. ಪೊಲೀಸ್ ಸೇವೆಯನ್ನು ಸಕ್ರಿಯ ಸೇವೆಯನ್ನಾಗಿ ಪರಿವರ್ತಿಸುವುದು ಈ ಕಾರ್ಯಕ್ರಮದ ಉದ್ದೇಶ’ ಎಂದು ಡಿವೈಎಸ್ಪಿ ಜಾವೇದ್ ಇನಾಮದಾರ ತಿಳಿಸಿದರು.</p>.<p>ನಗರದ ಪೊಲೀಸ್ ಠಾಣೆಯಲ್ಲಿ ಶನಿವಾರ ಏರ್ಪಡಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಬೀಟ್ ಪೊಲೀಸರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಆ ಕುಟುಂಬದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಬೇಕು. ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ಕುಟುಂಬದವರಿಂದ ಲಿಖಿತವಾಗಿ ಅಥವಾ ಮೌಖಿಕವಾಗಿ ದೂರು ಪಡೆಯಬೇಕು. ಸಾಧ್ಯವಾದಷ್ಟು ಅಲ್ಲಿಯೇ ಪರಿಹಾರ ಸೂಚಿಸಬೇಕು. ಗಂಭೀರ ವಿಷಯಗಳಿದ್ದಲ್ಲಿ ಮೇಲಧಿಕಾರಿ ಗಮನಕ್ಕೆ ತರಬೇಕು’ ಎಂದು ತಿಳಿಸಿದರು.</p>.<p>‘ಗ್ರಾಮದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪೊಲೀಸ್ ಠಾಣೆ, ವೃತ್ತ ಕಚೇರಿ, ಉಪ ವಿಭಾಗ, ವೃತ್ತ ನಿರೀಕ್ಷಕರ ದೂರವಾಣಿ, ನಿಯಂತ್ರಣ ಕೋಣೆ ಸಂಖ್ಯೆ ಸೇರಿದಂತೆ ಅಧಿಕಾರಿಗಳ ದೂರವಾಣಿ ಸಂಖ್ಯೆ ನಮೂದಿಸಬೇಕು. ಜನಸ್ನೇಹಿಯಾಗಿ ವರ್ತಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಮಹಿಳೆಯರ, ಮಕ್ಕಳ ಸುರಕ್ಷತೆ, ಮಾನವ ಕಳ್ಳ ಸಾಗಾಣಿಕೆ, ಮಕ್ಕಳ ಭಿಕ್ಷಾಟನೆ ಸೇರಿದಂತೆ ಪ್ರಚಲಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಸಂಘ, ಸಂಸ್ಥೆ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ತಿಳಿ ಹೇಳಬೇಕು. ಭದ್ರತಾ ಹಿತದೃಷ್ಟಿಯಿಂದ ಆಯಾ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಬೇಕು’ ಎಂದು ತಿಳಿಸಿದರು.</p>.<p>ಇನ್ಸ್ಪೆಕ್ಟರ್ ಉಮೇಶ, ಶಹಾಪುರ ಇನ್ಸ್ಪೆಕ್ಟರ್ ಮಹಾಂತೇಶ, ಪಿಎಸ್ಐಗಳಾದ ಶರಣಪ್ಪ ಹವಾಲ್ದಾರ್, ಕೃಷ್ಣ ಸುಬೇದಾರ, ಸಿದ್ದಣ್ಣ, ಶಿವರಾಜ ಪಾಟೀಲ, ಪಿಎಸ್ಐ ಶರಣಗೌಡ, ರಾಜಶೇಖರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>