<p><strong>ಜೇವರ್ಗಿ:</strong> ‘ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಮೇ 5 ರಿಂದ 17ರ ವರೆಗೆ ನಡೆಯುವ ಮನೆ ಮನೆ ಸಮೀಕ್ಷೆ ವೇಳೆ ಕುಟುಂಬದ ಯಾರಾದರೂ ಒಬ್ಬರು ಗಣತಿದಾರರಿಗೆ ಆಧಾರ್ ಕಾರ್ಡ್ ಅಥವಾ ಕುಟುಂಬದ ಪಡಿತರ ಚೀಟಿಯನ್ನು ತೋರಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಣಗೌಡ ಪಾಟೀಲ ತಿಳಿಸಿದರು.</p>.<p>ಪಟ್ಟಣದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಒಳಪಂಗಡಗಳ ಸಮೀಕ್ಷೆಯ ಪ್ರಯುಕ್ತ ಗಣತಿದಾರರು ಹಾಗೂ ಮೇಲ್ವಿಚಾರಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಗಾಗಿಯೇ ಈ ಸಮೀಕ್ಷೆ ನಡೆಯಲಿರುವುದರಿಂದ ಪ್ರತಿಯೊಬ್ಬರೂ ಗೊತ್ತಿದ್ದರೆ ಉಪಜಾತಿಯನ್ನು ಸಮೀಕ್ಷೆ ವೇಳೆ ನಮೂದಿಸಬೇಕು. ಪರಿಶಿಷ್ಟ ಜಾತಿಯಲ್ಲಿ ಕೇಂದ್ರ ಸರ್ಕಾರ 101 ಉಪಜಾತಿಗಳನ್ನು ಗುರುತಿಸಿದೆ. ಇವುಗಳಲ್ಲಿ ಯಾವುದೇ ಉಪಜಾತಿಗೆ ಸೇರಿದ್ದರೂ ಅದನ್ನು ನಮೂದಿಸಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ತಾಲ್ಲೂಕು ಪಂಚಾಯಿತಿ ಇಒ ರವಿಚಂದ್ರರೆಡ್ಡಿ ಲಕ್ಕುಂಡಿ ಶಿಬಿರ ಉದ್ಘಾಟಿಸಿದರು. ಗ್ರೇಡ್-2 ತಹಶೀಲ್ದಾರ್ ಗೋಪಾಲ ಕಪೂರ, ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಳ್ಳಿ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ‘ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಮೇ 5 ರಿಂದ 17ರ ವರೆಗೆ ನಡೆಯುವ ಮನೆ ಮನೆ ಸಮೀಕ್ಷೆ ವೇಳೆ ಕುಟುಂಬದ ಯಾರಾದರೂ ಒಬ್ಬರು ಗಣತಿದಾರರಿಗೆ ಆಧಾರ್ ಕಾರ್ಡ್ ಅಥವಾ ಕುಟುಂಬದ ಪಡಿತರ ಚೀಟಿಯನ್ನು ತೋರಿಸಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂಗಣಗೌಡ ಪಾಟೀಲ ತಿಳಿಸಿದರು.</p>.<p>ಪಟ್ಟಣದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಒಳಪಂಗಡಗಳ ಸಮೀಕ್ಷೆಯ ಪ್ರಯುಕ್ತ ಗಣತಿದಾರರು ಹಾಗೂ ಮೇಲ್ವಿಚಾರಕರಿಗಾಗಿ ಆಯೋಜಿಸಲಾಗಿದ್ದ ತರಬೇತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಗಾಗಿಯೇ ಈ ಸಮೀಕ್ಷೆ ನಡೆಯಲಿರುವುದರಿಂದ ಪ್ರತಿಯೊಬ್ಬರೂ ಗೊತ್ತಿದ್ದರೆ ಉಪಜಾತಿಯನ್ನು ಸಮೀಕ್ಷೆ ವೇಳೆ ನಮೂದಿಸಬೇಕು. ಪರಿಶಿಷ್ಟ ಜಾತಿಯಲ್ಲಿ ಕೇಂದ್ರ ಸರ್ಕಾರ 101 ಉಪಜಾತಿಗಳನ್ನು ಗುರುತಿಸಿದೆ. ಇವುಗಳಲ್ಲಿ ಯಾವುದೇ ಉಪಜಾತಿಗೆ ಸೇರಿದ್ದರೂ ಅದನ್ನು ನಮೂದಿಸಬೇಕು’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ತಾಲ್ಲೂಕು ಪಂಚಾಯಿತಿ ಇಒ ರವಿಚಂದ್ರರೆಡ್ಡಿ ಲಕ್ಕುಂಡಿ ಶಿಬಿರ ಉದ್ಘಾಟಿಸಿದರು. ಗ್ರೇಡ್-2 ತಹಶೀಲ್ದಾರ್ ಗೋಪಾಲ ಕಪೂರ, ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಳ್ಳಿ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>