<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಕಾವೇರಿದ್ದು, ಆನ್ಲೈನ್ ಮೂಲಕ ಹಣ ತೊಡಗಿಸುವುದು ಕಂಡುಬರುತ್ತಿದೆ.</p>.<p>ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಐಪಿಎಲ್ ಬೆಟ್ಟಿಂಗ್ ಆನ್ಲೈನ್ ಗೇಮ್ ಹಾವಳಿಯಿಂದ ಯುವಜನತೆ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.</p>.<p>ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಪ್ರದೇಶದಲ್ಲೂ ಈಗ ಬೆಟ್ಟಿಂಗ್ ಹಾವಳಿ ಕಾವೇರಿದೆ. ಶಾಲಾ–ಕಾಲೇಜುಗಳಿಗೆ ರಜೆ ನೀಡಿದ್ದೂ ವಿದ್ಯಾರ್ಥಿಗಳು ಐಪಿಎಲ್ ಬೆಟ್ಟಿಂಗ್ ಆ್ಯಪ್ಗಳನ್ನು ತಡಕಾಡುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ. </p>.<p><strong>ಮೊಬೈಲ್ ಜಪ್ತಿ</strong></p><p>ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಲಾಗಿದೆ. Cric365DAY ಆ್ಯಪ್ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ದಂಧೆಕೋರರು, ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ.</p>.<p>‘ಸುಶಿಕ್ಷಿತ ಯುವಕರು ಶಿಕ್ಷಣ ಮುಗಿದ ನಂತರ ಕೆಲಸವಿಲ್ಲದೇ ಖಾಲಿ ಕುಳಿತಿರುವಾಗ ಮೊದಮೊದಲು ಟೈಮ್ ಪಾಸ್ಗಾಗಿ ಇಂತಹ ಆಟಗಳಿಗೆ ಹೋಗುತ್ತಿದ್ದಾರೆ. ಬರುಬರುತ್ತಾ ಈ ಆಟ ಚಟವಾಗಿ ಪರಿವರ್ತನೆಯಾಗುತ್ತಿದೆ. ಮೇಲಾಗಿ ಸಾಮಾಜಿಕ ಜಾಲತಾಣ ಹಿಡಿದು ಎಲ್ಲೆಡೆ ಇಂತಹ ಆನ್ಲೈನ್ ಗೇಮಿಂಗ್ ಜಾಹೀರಾತುಗಳು ಯುವಕರನ್ನು ದಾರಿ ತಪ್ಪಿಸುವ ಮಹತ್ತರ ಕೆಲಸ ಮಾಡುತ್ತಿವೆ’ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಮುದುಕಪ್ಪ ಚಾಮನಳ್ಳಿ.</p>.<div><blockquote>ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧಿಸಿದಂತೆ 9 ಪ್ರಕರಣಗಳನ್ನು ದಾಖಲಿಸಲಾಗಿದೆ. ಅದರಲ್ಲೂ ಶಹಾಪುರ ಸುರಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ </blockquote><span class="attribution">-ಪೃಥ್ವಿಕ್ ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><blockquote>ಇತ್ತೀಚೆಗೆ ಎಲ್ಲ ವಿಧದ ಜೂಜುಗಳ ಹಾವಳಿ ಹೆಚ್ಚಾಗುತ್ತಿದ್ದು ಯುವಜನತೆ ಅದರಲ್ಲೂ ಗ್ರಾಮೀಣ ಯುವಕರು ಇಂತಹ ಚಟಗಳಿಗೆ ಈಡಾಗುತ್ತಿದ್ದಾರೆ. ಕೂಡಲೇ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು </blockquote><span class="attribution">-ಮುದುಕಪ್ಪ ಚಾಮನಳ್ಳಿ ಸಾಮಾಜಿಕ ಕಾರ್ಯಕರ್ತ</span></div>.<p><strong>₹41 ಲಕ್ಷ ವಶ</strong></p><p>ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ ₹41 ಲಕ್ಷ ಹಣ ವಶಪಡಿಸಿಕೊಳ್ಳಲಾಗಿದೆ. ಒಂದು ಲಕ್ಷ ನಗದು ₹40 ಲಕ್ಷ ಬ್ಯಾಂಕಿಂಗ್ ಮೂಲಕ ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಆನ್ಲೈನ್ ಬುಕಿಂಗ್ ಬುಕಿಗಳ ವಿರುದ್ಧ ಪೊಲೀಸರು ಅಲ್ಲಲ್ಲಿ ಪ್ರಕರಣ ದಾಖಲಿಸುತ್ತಿದ್ದಾರೆ. ಈಗಾಗಲೇ ಪೊಲೀಸರು ಬುಕ್ಕಿಗಳನ್ನು ಹುಡುಕಲು ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ. ಕೆಲವರು ವಿಜಯಪುರ ರಾಯಚೂರು ಸೇರಿದಂತೆ ಗೋವಾಗೆ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರ ಸೇರಿದಂತೆ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಕಾವೇರಿದ್ದು, ಆನ್ಲೈನ್ ಮೂಲಕ ಹಣ ತೊಡಗಿಸುವುದು ಕಂಡುಬರುತ್ತಿದೆ.</p>.<p>ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ. ಐಪಿಎಲ್ ಬೆಟ್ಟಿಂಗ್ ಆನ್ಲೈನ್ ಗೇಮ್ ಹಾವಳಿಯಿಂದ ಯುವಜನತೆ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.</p>.<p>ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಪ್ರದೇಶದಲ್ಲೂ ಈಗ ಬೆಟ್ಟಿಂಗ್ ಹಾವಳಿ ಕಾವೇರಿದೆ. ಶಾಲಾ–ಕಾಲೇಜುಗಳಿಗೆ ರಜೆ ನೀಡಿದ್ದೂ ವಿದ್ಯಾರ್ಥಿಗಳು ಐಪಿಎಲ್ ಬೆಟ್ಟಿಂಗ್ ಆ್ಯಪ್ಗಳನ್ನು ತಡಕಾಡುತ್ತಿದ್ದಾರೆ ಎನ್ನುವ ಮಾಹಿತಿ ಬಂದಿದೆ. </p>.<p><strong>ಮೊಬೈಲ್ ಜಪ್ತಿ</strong></p><p>ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಲಾಗಿದೆ. Cric365DAY ಆ್ಯಪ್ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ದಂಧೆಕೋರರು, ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ.</p>.<p>‘ಸುಶಿಕ್ಷಿತ ಯುವಕರು ಶಿಕ್ಷಣ ಮುಗಿದ ನಂತರ ಕೆಲಸವಿಲ್ಲದೇ ಖಾಲಿ ಕುಳಿತಿರುವಾಗ ಮೊದಮೊದಲು ಟೈಮ್ ಪಾಸ್ಗಾಗಿ ಇಂತಹ ಆಟಗಳಿಗೆ ಹೋಗುತ್ತಿದ್ದಾರೆ. ಬರುಬರುತ್ತಾ ಈ ಆಟ ಚಟವಾಗಿ ಪರಿವರ್ತನೆಯಾಗುತ್ತಿದೆ. ಮೇಲಾಗಿ ಸಾಮಾಜಿಕ ಜಾಲತಾಣ ಹಿಡಿದು ಎಲ್ಲೆಡೆ ಇಂತಹ ಆನ್ಲೈನ್ ಗೇಮಿಂಗ್ ಜಾಹೀರಾತುಗಳು ಯುವಕರನ್ನು ದಾರಿ ತಪ್ಪಿಸುವ ಮಹತ್ತರ ಕೆಲಸ ಮಾಡುತ್ತಿವೆ’ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಮುದುಕಪ್ಪ ಚಾಮನಳ್ಳಿ.</p>.<div><blockquote>ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧಿಸಿದಂತೆ 9 ಪ್ರಕರಣಗಳನ್ನು ದಾಖಲಿಸಲಾಗಿದೆ. ಅದರಲ್ಲೂ ಶಹಾಪುರ ಸುರಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ </blockquote><span class="attribution">-ಪೃಥ್ವಿಕ್ ಶಂಕರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><blockquote>ಇತ್ತೀಚೆಗೆ ಎಲ್ಲ ವಿಧದ ಜೂಜುಗಳ ಹಾವಳಿ ಹೆಚ್ಚಾಗುತ್ತಿದ್ದು ಯುವಜನತೆ ಅದರಲ್ಲೂ ಗ್ರಾಮೀಣ ಯುವಕರು ಇಂತಹ ಚಟಗಳಿಗೆ ಈಡಾಗುತ್ತಿದ್ದಾರೆ. ಕೂಡಲೇ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು </blockquote><span class="attribution">-ಮುದುಕಪ್ಪ ಚಾಮನಳ್ಳಿ ಸಾಮಾಜಿಕ ಕಾರ್ಯಕರ್ತ</span></div>.<p><strong>₹41 ಲಕ್ಷ ವಶ</strong></p><p>ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ ₹41 ಲಕ್ಷ ಹಣ ವಶಪಡಿಸಿಕೊಳ್ಳಲಾಗಿದೆ. ಒಂದು ಲಕ್ಷ ನಗದು ₹40 ಲಕ್ಷ ಬ್ಯಾಂಕಿಂಗ್ ಮೂಲಕ ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಆನ್ಲೈನ್ ಬುಕಿಂಗ್ ಬುಕಿಗಳ ವಿರುದ್ಧ ಪೊಲೀಸರು ಅಲ್ಲಲ್ಲಿ ಪ್ರಕರಣ ದಾಖಲಿಸುತ್ತಿದ್ದಾರೆ. ಈಗಾಗಲೇ ಪೊಲೀಸರು ಬುಕ್ಕಿಗಳನ್ನು ಹುಡುಕಲು ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ. ಕೆಲವರು ವಿಜಯಪುರ ರಾಯಚೂರು ಸೇರಿದಂತೆ ಗೋವಾಗೆ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>