<p><strong>ವಡಗೇರಾ:</strong> ‘ಕಾನೂನು ಪದವಿ ಓದಲು ಎಲ್ಲರೂ ಆಸಕ್ತಿ ಇದೆ. ಆದರೆ ಕಪ್ಪು ಕೋಟು ಧರಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷಿಗಳನ್ನು ಕಲೆ ಹಾಕಿ ಕೇಸ್ ವಾದಿಸುವುದು ಕಷ್ಟದ ಕೆಲಸ’ ಎಂದು ಜವಾಹರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಇಕ್ಬಾಲ್ ಕಾಸಿಂ ಹೇಳಿದರು.</p>.<p>ತಾಲ್ಲೂಕಿನ ಕುಮನೂರು ಗ್ರಾಮದಲ್ಲಿ ಕಾನೂನು ಪದವಿ ಪಡೆದ ಮೊದಲ ಯುವಕ ಬಾಬು ಎಸ್.ಪೊಲೀಸ್ ಪಟೇಲ್ ಅವರಿಗೆ ಗ್ರಾಮಸ್ಥರಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಭಾಗದ ಯುವಕರು ಕಾನೂನು ಪದವಿ ಓದಲು ಹೆಚ್ಚಿನ ಆಸಕ್ತಿ ತೋರಿಸಬೇಕು. ಕೆಲವೊಬ್ಬರು ಕಾನೂನು ಪದವಿ ಪಡೆದ ಮೇಲೆ ಈ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಮುಂದುವರಿಸಲು ಬಯಸದಿರುವುದು ಆತಂಕಕಾರಿ ವಿಷಯವಾಗಿದೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ಬಾಬು ಎಸ್. ಪೊಲೀಸ್ಪಟೇಲ್ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ಶಿಕ್ಷಕರಾದ ಮುದಕ್ಕಪ್ಪ, ಫಯಾಜ್ ಸಾಬ್ ಖುರೇಶಿ, ಮಲ್ಲಿಕಾರ್ಜುನ, ಕುಮಲಯ್ಯ, ಮರಿಲಿಂಗಪ್ಪ, ಚಾಂದ್ ಪಟೇಲ್, ಸಲೀಂಪಾಷ್, ಕುಮಲಪ್ಪ, ಮಕದಂ ಸಾಬ್, ಲತೀಪ್ ಸಾಬ್, ಮಹ್ಮದ್ ಮೊಸಿನ್ ಸಾಬ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ಕಾನೂನು ಪದವಿ ಓದಲು ಎಲ್ಲರೂ ಆಸಕ್ತಿ ಇದೆ. ಆದರೆ ಕಪ್ಪು ಕೋಟು ಧರಿಸಿ ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷಿಗಳನ್ನು ಕಲೆ ಹಾಕಿ ಕೇಸ್ ವಾದಿಸುವುದು ಕಷ್ಟದ ಕೆಲಸ’ ಎಂದು ಜವಾಹರ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಇಕ್ಬಾಲ್ ಕಾಸಿಂ ಹೇಳಿದರು.</p>.<p>ತಾಲ್ಲೂಕಿನ ಕುಮನೂರು ಗ್ರಾಮದಲ್ಲಿ ಕಾನೂನು ಪದವಿ ಪಡೆದ ಮೊದಲ ಯುವಕ ಬಾಬು ಎಸ್.ಪೊಲೀಸ್ ಪಟೇಲ್ ಅವರಿಗೆ ಗ್ರಾಮಸ್ಥರಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮೀಣ ಭಾಗದ ಯುವಕರು ಕಾನೂನು ಪದವಿ ಓದಲು ಹೆಚ್ಚಿನ ಆಸಕ್ತಿ ತೋರಿಸಬೇಕು. ಕೆಲವೊಬ್ಬರು ಕಾನೂನು ಪದವಿ ಪಡೆದ ಮೇಲೆ ಈ ಕ್ಷೇತ್ರದಲ್ಲಿ ವೃತ್ತಿ ಜೀವನವನ್ನು ಮುಂದುವರಿಸಲು ಬಯಸದಿರುವುದು ಆತಂಕಕಾರಿ ವಿಷಯವಾಗಿದೆ’ ಎಂದರು.</p>.<p>ಸನ್ಮಾನ ಸ್ವೀಕರಿಸಿದ ಬಾಬು ಎಸ್. ಪೊಲೀಸ್ಪಟೇಲ್ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ಶಿಕ್ಷಕರಾದ ಮುದಕ್ಕಪ್ಪ, ಫಯಾಜ್ ಸಾಬ್ ಖುರೇಶಿ, ಮಲ್ಲಿಕಾರ್ಜುನ, ಕುಮಲಯ್ಯ, ಮರಿಲಿಂಗಪ್ಪ, ಚಾಂದ್ ಪಟೇಲ್, ಸಲೀಂಪಾಷ್, ಕುಮಲಪ್ಪ, ಮಕದಂ ಸಾಬ್, ಲತೀಪ್ ಸಾಬ್, ಮಹ್ಮದ್ ಮೊಸಿನ್ ಸಾಬ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>