ಮಾಗಣಗೇರಿ ಬೃಹನ್ಮಠದ ವಿಶ್ವಾರಾಧ್ಯ ಶಿವಾಚಾರ್ಯರು, ನಗರದ ಗುಂಬಳಾಪುರ ಮಠದ ಸಿದ್ದೇಶ್ವರ ಶಿವಾಚಾರ್ಯರು, ಹಿರೇಮಠದ ಸೂಗೂರೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಡಿಗಲ್ಲು ನೆರವೇರಿಸಲಿದ್ದಾರೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.