<p><strong>ಯಾದಗಿರಿ</strong>: ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ ಆರೋಪದಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ (ಎಇ) ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ ಈ ಬಗ್ಗೆ ದೂರು ನೀಡಿದ್ದರು. ಕಾರ್ಯಪಾಲಕ ಎಂಜಿನಿಯರ್ ಆನಂದ, ಎಇಇ ಬನ್ನಪ್ಪ, ನೈರ್ಮಲ್ಯ ಇಲಾಖೆ ಶಹಾಪುರ ಉಪವಿಭಾಗದ ಹೆಚ್ಚುವರಿ ಪ್ರಭಾರ ಸಹಾಯಕ ಎಂಜಿನಿಯರ್–2 ಎನ್.ಶ್ರೀನಿವಾಸ, ಗುತ್ತಿಗೆದಾರ ವೆಂಕಟೇಶ ಗುರಸಣಗಿ ಮತ್ತು ಥರ್ಡ್ ಪಾರ್ಟಿ ಸಂಸ್ಥೆ ಬೆಂಗಳೂರಿನ ಟ್ರಾನ್ಸ್ಪೋರ್ಟೆಕ್ ವಿರುದ್ಧ ಪ್ರಕರಣ ದಾಖಲಾಗಿದೆ. </p>.<p>‘ಶಹಾಪುರ ವ್ಯಾಪ್ತಿಯ ನಾಯ್ಕಲ್ ಗ್ರಾಮದ ಜೆಜೆಎಂ ಕಾಮಗಾರಿ ಶೇ 35ರಷ್ಟು ಮುಗಿದಿತ್ತು. ಶೇ 82.5ರಷ್ಟು ಪ್ರಗತಿಯಾಗಿದೆ ಎಂದು ನಕಲಿ ದಾಖಲೆ, ದೃಢೀಕರಣ ಪತ್ರ ಸೃಷ್ಟಿಸಿದ್ದಾರೆ. ಗುತ್ತಿಗೆದಾರ ₹ 1.45 ಕೋಟಿ ಮೊತ್ತದ ಕಾಮಗಾರಿ ಮಾಡಿದ್ದರೂ ಹೆಚ್ಚುವರಿಯಾಗಿ ₹ 1.90 ಕೋಟಿ ಬಿಲ್ ಪಾವತಿಸಿ ವಂಚನೆ ಎಸಗಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಅವ್ಯವಹಾರ ಆರೋಪದಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ (ಎಇ) ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ವೆಂಕಟೇಶ ಚಟ್ನಳ್ಳಿ ಈ ಬಗ್ಗೆ ದೂರು ನೀಡಿದ್ದರು. ಕಾರ್ಯಪಾಲಕ ಎಂಜಿನಿಯರ್ ಆನಂದ, ಎಇಇ ಬನ್ನಪ್ಪ, ನೈರ್ಮಲ್ಯ ಇಲಾಖೆ ಶಹಾಪುರ ಉಪವಿಭಾಗದ ಹೆಚ್ಚುವರಿ ಪ್ರಭಾರ ಸಹಾಯಕ ಎಂಜಿನಿಯರ್–2 ಎನ್.ಶ್ರೀನಿವಾಸ, ಗುತ್ತಿಗೆದಾರ ವೆಂಕಟೇಶ ಗುರಸಣಗಿ ಮತ್ತು ಥರ್ಡ್ ಪಾರ್ಟಿ ಸಂಸ್ಥೆ ಬೆಂಗಳೂರಿನ ಟ್ರಾನ್ಸ್ಪೋರ್ಟೆಕ್ ವಿರುದ್ಧ ಪ್ರಕರಣ ದಾಖಲಾಗಿದೆ. </p>.<p>‘ಶಹಾಪುರ ವ್ಯಾಪ್ತಿಯ ನಾಯ್ಕಲ್ ಗ್ರಾಮದ ಜೆಜೆಎಂ ಕಾಮಗಾರಿ ಶೇ 35ರಷ್ಟು ಮುಗಿದಿತ್ತು. ಶೇ 82.5ರಷ್ಟು ಪ್ರಗತಿಯಾಗಿದೆ ಎಂದು ನಕಲಿ ದಾಖಲೆ, ದೃಢೀಕರಣ ಪತ್ರ ಸೃಷ್ಟಿಸಿದ್ದಾರೆ. ಗುತ್ತಿಗೆದಾರ ₹ 1.45 ಕೋಟಿ ಮೊತ್ತದ ಕಾಮಗಾರಿ ಮಾಡಿದ್ದರೂ ಹೆಚ್ಚುವರಿಯಾಗಿ ₹ 1.90 ಕೋಟಿ ಬಿಲ್ ಪಾವತಿಸಿ ವಂಚನೆ ಎಸಗಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>