<p><strong>ಯಾದಗಿರಿ</strong>: ವಡಗೇರಾ ತಾಲ್ಲೂಕಿನ ತುಮಕೂರಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ರೈತರಿಗೆ ₹23 ಕೋಟಿ ಕಬ್ಬಿನ ಬಾಕಿ ನೀಡದೆ ಪರಾರಿಯಾಗಿದ್ದು, ಶೀಘ್ರವೇ ಮಾಲಿಕರನ್ನು ಪತ್ತೆ ಹಚ್ಚಿ ಬಾಕಿ ಹಣ ವಸೂಲಿ ಮಾಡಿ ರೈತರಿಗೆ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಜಾಥಾ ನಡೆಸಿದರು.</p>.<p>ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಅಲ್ಲಿಂದ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.</p>.<p>ಕಳೆದ 10 ತಿಂಗಳ ಹಿಂದೆಯೇ ಕಬ್ಬು ಪೂರೈಸಿದ ರೈತರಿಗೆ ಬಾಕಿ ಪಾವತಿಸದೇ ದಿನ ದೂಡಿದ್ದಲ್ಲದೇ ಪ್ರತಿಭಟನೆ ಮಾಡಿದರೂ ಕ್ಯಾರೆ ಅನ್ನದೇ ಲಿಖಿತ ರೂಪದಲ್ಲಿ ಒಂದು ತಿಂಗಳಲ್ಲಿ ಬಾಕಿ ಪಾವತಿಸುವುದಾಗಿ ಹೇಳಿದ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕರು, ಆ ಅವಧಿಯೂ ಪೂರ್ಣಗೊಂಡರೂ ಹಣ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಕ್ಷಣ ಕಾರ್ಖಾನೆ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ರೈತರಿಗೆ ಬರಬೇಕಾದ ಬಾಕಿ ಪಾವತಿಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.</p>.<p>ಈ ವೇಳೆ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಸನಗೌಡ ಚಿಂಚೋಳಿ, ತಾಲ್ಲೂಕು ಅಧ್ಯಕ್ಷ ಮಂಜುಗೌಡ ತಂಗಡಿಗಿ, ಶಹಾಬಾದ ತಾಲ್ಲೂಕು ಅಧ್ಯಕ್ಷ ಬಸವರಾಜ ಕೋರಿ ಸೇರಿದಂತೆ ಹಲವಾರು ರೈತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ವಡಗೇರಾ ತಾಲ್ಲೂಕಿನ ತುಮಕೂರಿನ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ರೈತರಿಗೆ ₹23 ಕೋಟಿ ಕಬ್ಬಿನ ಬಾಕಿ ನೀಡದೆ ಪರಾರಿಯಾಗಿದ್ದು, ಶೀಘ್ರವೇ ಮಾಲಿಕರನ್ನು ಪತ್ತೆ ಹಚ್ಚಿ ಬಾಕಿ ಹಣ ವಸೂಲಿ ಮಾಡಿ ರೈತರಿಗೆ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಜಾಥಾ ನಡೆಸಿದರು.</p>.<p>ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಅಲ್ಲಿಂದ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.</p>.<p>ಕಳೆದ 10 ತಿಂಗಳ ಹಿಂದೆಯೇ ಕಬ್ಬು ಪೂರೈಸಿದ ರೈತರಿಗೆ ಬಾಕಿ ಪಾವತಿಸದೇ ದಿನ ದೂಡಿದ್ದಲ್ಲದೇ ಪ್ರತಿಭಟನೆ ಮಾಡಿದರೂ ಕ್ಯಾರೆ ಅನ್ನದೇ ಲಿಖಿತ ರೂಪದಲ್ಲಿ ಒಂದು ತಿಂಗಳಲ್ಲಿ ಬಾಕಿ ಪಾವತಿಸುವುದಾಗಿ ಹೇಳಿದ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕರು, ಆ ಅವಧಿಯೂ ಪೂರ್ಣಗೊಂಡರೂ ಹಣ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಕ್ಷಣ ಕಾರ್ಖಾನೆ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ರೈತರಿಗೆ ಬರಬೇಕಾದ ಬಾಕಿ ಪಾವತಿಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.</p>.<p>ಈ ವೇಳೆ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಬಸನಗೌಡ ಚಿಂಚೋಳಿ, ತಾಲ್ಲೂಕು ಅಧ್ಯಕ್ಷ ಮಂಜುಗೌಡ ತಂಗಡಿಗಿ, ಶಹಾಬಾದ ತಾಲ್ಲೂಕು ಅಧ್ಯಕ್ಷ ಬಸವರಾಜ ಕೋರಿ ಸೇರಿದಂತೆ ಹಲವಾರು ರೈತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>