<p><strong>ಸುರಪುರ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಶಕ್ತಿಯನ್ನು ಬಿಂಬಿಸಿದ ಕೀರ್ತಿ ಜಯಪ್ರಕಾಶ ನಾರಾಯಣ ಅವರಿಗೆ ಸಲ್ಲುತ್ತದೆ. ಅಂತೇಯೇ ಅವರಿಗೆ ಲೋಕ ನಾಯಕ ಎಂಬ ಹೆಸರು ಬಂದಿದೆ’ ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಹೇಳಿದರು.</p>.<p>ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಜಯಪ್ರಕಾಶ ನಾರಾಯಣ ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಜಯಪ್ರಕಾಶ ನಾರಾಯಣ ಅವರ ತತ್ವ ಸಿದ್ಧಾಂತದ ತಳಹದಿಯ ಮೇಲೆ ಜೆಡಿಎಸ್ ಪಕ್ಷ ನಡೆಯುತ್ತಿದೆ. ಹೀಗಾಗಿ ಜೆಡಿಎಸ್ ರಾಜ್ಯದಲ್ಲಿ ಪ್ರಬಲ ಪಕ್ಷವಾಗಿದೆ’ ಎಂದರು.</p>.<p>‘ಈಶಾನ್ಯ ಶಿಕ್ಷಕರ ಮತ ಕ್ಷೇತ್ರದಿಂದ ಶಿಕ್ಷಕರ ನೋವಿಗೆ ಸ್ಪಂದಿಸುವ, ಕೆ.ಸಿ.ಎಸ್.ಆರ್. ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಪಿಯು ಉಪನ್ಯಾಸಕರ ಸಂಂಘದ ಮಾಜಿ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದರು.</p>.<p>ಸಂಗಣ್ಣ ಬಾಕ್ಲಿ, ಶಾಂತು ತಳವವಾರಗೇರಾ, ಶೌಕತಅಲಿ, ಎಂ.ಡಿ. ಬಾಬಾ, ಅಲ್ತಾಫ ಸಗರಿ, ಗೌಸ್ ಸಾಹುಕಾರ, ವಿನಾಯಕ ಕಕ್ಕೇರಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಶಕ್ತಿಯನ್ನು ಬಿಂಬಿಸಿದ ಕೀರ್ತಿ ಜಯಪ್ರಕಾಶ ನಾರಾಯಣ ಅವರಿಗೆ ಸಲ್ಲುತ್ತದೆ. ಅಂತೇಯೇ ಅವರಿಗೆ ಲೋಕ ನಾಯಕ ಎಂಬ ಹೆಸರು ಬಂದಿದೆ’ ಎಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಹೇಳಿದರು.</p>.<p>ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಜಯಪ್ರಕಾಶ ನಾರಾಯಣ ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಜಯಪ್ರಕಾಶ ನಾರಾಯಣ ಅವರ ತತ್ವ ಸಿದ್ಧಾಂತದ ತಳಹದಿಯ ಮೇಲೆ ಜೆಡಿಎಸ್ ಪಕ್ಷ ನಡೆಯುತ್ತಿದೆ. ಹೀಗಾಗಿ ಜೆಡಿಎಸ್ ರಾಜ್ಯದಲ್ಲಿ ಪ್ರಬಲ ಪಕ್ಷವಾಗಿದೆ’ ಎಂದರು.</p>.<p>‘ಈಶಾನ್ಯ ಶಿಕ್ಷಕರ ಮತ ಕ್ಷೇತ್ರದಿಂದ ಶಿಕ್ಷಕರ ನೋವಿಗೆ ಸ್ಪಂದಿಸುವ, ಕೆ.ಸಿ.ಎಸ್.ಆರ್. ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಪಿಯು ಉಪನ್ಯಾಸಕರ ಸಂಂಘದ ಮಾಜಿ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರಿಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು’ ಎಂದರು.</p>.<p>ಸಂಗಣ್ಣ ಬಾಕ್ಲಿ, ಶಾಂತು ತಳವವಾರಗೇರಾ, ಶೌಕತಅಲಿ, ಎಂ.ಡಿ. ಬಾಬಾ, ಅಲ್ತಾಫ ಸಗರಿ, ಗೌಸ್ ಸಾಹುಕಾರ, ವಿನಾಯಕ ಕಕ್ಕೇರಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>