ಉಡುಪಿ: 'ಮಠ- ಮಂದಿರ ವಶಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗುತ್ತಾರೆ. ಆದರೆ ಅನ್ಯ ಧರ್ಮದ ಧಾರ್ಮಿಕ ಕೇಂದ್ರಗಳ ವಿಷಯ ಬಂದಾಗ ಅವರ ಗಂಡಸ್ತನ ಎಲ್ಲಿಗೆ ಹೋಗಿರುತ್ತದೆ' ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಬೈಂದೂರಿನಲ್ಲಿ ನಡೆದ ಜನ ಸುರಕ್ಷಾ ಯಾತ್ರೆಯಲ್ಲಿ ಪಾಲ್ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಅವರ ಮೈಯಲ್ಲಿ ಟಿಪ್ಪು ಸುಲ್ತಾನ್ ರಕ್ತ ಹರಿಯುತ್ತಿದೆ, ಅದಕ್ಕೇ ಅವರು ಜಯಂತಿ ಆಚರಿಸುತ್ತಿದ್ದಾರೆ ಎಂದರು.