<p><strong>ಹತ್ತಿಕುಣಿ (ಯರಗೋಳ):</strong> ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.</p>.<p>ಕಳೆದ 2 ವರ್ಷಗಳ ಹಿಂದೆ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಅಂದಾಜು ₹3.11 ಕೋಟಿ ಅನುದಾನ ಕಾಮಗಾರಿ ಟೆಂಡರ್ ಕರೆಯಲಾಯಿತು. ಕಾಮಗಾರಿ ವಿಳಂಬದಿಂದ ಟ್ಯಾಂಕ್ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿಲ್ಲ. ಗ್ರಾಮ ಪಂಚಾಯಿತಿಯಿಂದ 3 ಕೊಳವೆ ಬಾವಿಗಳ ಮೂಲಕ ನೀರು ಪೂರೈಸುತ್ತಿದ್ದು, ಗ್ರಾಮದ ಪ್ರತಿ ಕುಟುಂಬಗಳಿಗೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ. ಜನರು ನೀರು ತರಲು ಪರದಾಡುತ್ತಿದ್ದಾರೆ.</p>.<p>‘ಕಾಮಗಾರಿ ಮೇಲುಸ್ತುವಾರಿ ಹೊಂದಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಸೂಕ್ತ ಕಾಮಗಾರಿ ಪರಿಶೀಲನೆ ಮಾಡದೆ, ಗುತ್ತಿಗೆದಾರನಿಗೆ ಅಂದಾಜು ₹1.20 ಕೋಟಿ ಬಿಲ್ ಮಾಡಿದ್ದಾರೆ. ಯೋಜನೆ ಕಾಮಗಾರಿ ಯಾವಾಗ ಮುಗಿಯುತ್ತದೆ. ಜನರಿಗೆ ಕುಡಿಯುವ ನೀರು ಸರಬರಾಜಾಗುತ್ತದೆ ಇಲ್ಲವೇ ಎಂಬ ಸಂಶಯ ಕಾಡುತ್ತಿದೆ’ ಎಂದು ಗ್ರಾಮದ ರೈತ ಸಂಘದ ಮುಖಂಡ ಹಣಮಂತ ಮಡಿವಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಆನಂದ ಅವರನ್ನು ಸಂಪರ್ಕಿಸಿದಾಗ, ‘ಗುತ್ತಿಗೆದಾರನಿಗೆ ಕಾಮಗಾರಿ ವಿಳಂಬ ಕುರಿತು ನೋಟಿಸ್ ನೀಡಿದ್ದೇವೆ, ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹತ್ತಿಕುಣಿ (ಯರಗೋಳ):</strong> ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿ ಮಂದಗತಿಯಲ್ಲಿ ಸಾಗಿದ್ದು, ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.</p>.<p>ಕಳೆದ 2 ವರ್ಷಗಳ ಹಿಂದೆ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಅಂದಾಜು ₹3.11 ಕೋಟಿ ಅನುದಾನ ಕಾಮಗಾರಿ ಟೆಂಡರ್ ಕರೆಯಲಾಯಿತು. ಕಾಮಗಾರಿ ವಿಳಂಬದಿಂದ ಟ್ಯಾಂಕ್ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿಲ್ಲ. ಗ್ರಾಮ ಪಂಚಾಯಿತಿಯಿಂದ 3 ಕೊಳವೆ ಬಾವಿಗಳ ಮೂಲಕ ನೀರು ಪೂರೈಸುತ್ತಿದ್ದು, ಗ್ರಾಮದ ಪ್ರತಿ ಕುಟುಂಬಗಳಿಗೆ ನೀರು ತಲುಪಿಸಲು ಸಾಧ್ಯವಾಗುತ್ತಿಲ್ಲ. ಜನರು ನೀರು ತರಲು ಪರದಾಡುತ್ತಿದ್ದಾರೆ.</p>.<p>‘ಕಾಮಗಾರಿ ಮೇಲುಸ್ತುವಾರಿ ಹೊಂದಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಸೂಕ್ತ ಕಾಮಗಾರಿ ಪರಿಶೀಲನೆ ಮಾಡದೆ, ಗುತ್ತಿಗೆದಾರನಿಗೆ ಅಂದಾಜು ₹1.20 ಕೋಟಿ ಬಿಲ್ ಮಾಡಿದ್ದಾರೆ. ಯೋಜನೆ ಕಾಮಗಾರಿ ಯಾವಾಗ ಮುಗಿಯುತ್ತದೆ. ಜನರಿಗೆ ಕುಡಿಯುವ ನೀರು ಸರಬರಾಜಾಗುತ್ತದೆ ಇಲ್ಲವೇ ಎಂಬ ಸಂಶಯ ಕಾಡುತ್ತಿದೆ’ ಎಂದು ಗ್ರಾಮದ ರೈತ ಸಂಘದ ಮುಖಂಡ ಹಣಮಂತ ಮಡಿವಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಆನಂದ ಅವರನ್ನು ಸಂಪರ್ಕಿಸಿದಾಗ, ‘ಗುತ್ತಿಗೆದಾರನಿಗೆ ಕಾಮಗಾರಿ ವಿಳಂಬ ಕುರಿತು ನೋಟಿಸ್ ನೀಡಿದ್ದೇವೆ, ಕಾಮಗಾರಿ ವೇಗ ಪಡೆದುಕೊಳ್ಳುತ್ತಿದೆ. ಆದಷ್ಟು ಬೇಗನೆ ಕಾಮಗಾರಿ ಮುಕ್ತಾಯಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು’ ಎಂದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>