ಇಲ್ಲಿನ ಮಧುವನಹಳ್ಳಿಯ ಶಿವರಾಜು ಎಂಬುವರ ಅಂಗಡಿ ಮೇಲೆ ಸೆಕ್ಟರ್ ಮ್ಯಾಜಿಸ್ಟ್ರೇಟ್ ಸರಿತಾ ಕುಮಾರಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ಈ ಗಡಿಯಾರಗಳನ್ನು ಮತದಾರರಿಗೆ ಹಂಚಲು ತರಲಾಗಿತ್ತು ಎಂದು ಆರೋಪಿಸಲಾಗಿದೆ.ಅಂಗಡಿ ಮಾಲೀಕ ಶಿವರಾಜು, ಆರ್.ಮಂಜುನಾಥ್, ಬಸವಶೆಟ್ಟಿ ವಿರುದ್ಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.