ಕಳೆದ ಹಲವು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದ ಗಾಳಿ ಬೀಸುವ ಮೂಲಕ ಮಳೆಯಾಗುತ್ತಿರುವುದರಿಂದ ವಲಯದ ದೇವಾಪುರ, ತಿಂಥಣಿ, ದೇವತ್ಕಲ್ ಹಾಗೂ ಆಲ್ದಾಳ್ ಗ್ರಾ.ಪಂ. ವ್ಯಾಪ್ತಿಗಳ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಭತ್ತ, ತೊಗರಿ ಹಾಗೂ ಹತ್ತಿ ಬೆಳೆಗಳು ಸಂಪೂರ್ಣ ನೆಲಕ್ಕಚ್ಚಿವೆ. ಮನೆಗಳ ಮೇಲ್ಚಾವಣಿ ಹಾಗೂ ಗೋಡೆಗಳು ಕುಸಿದಿವೆ. ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.