ವಾರ್ಡ್ಗಳಲ್ಲಿ ದಿನದಿಂದ ದಿನಕ್ಕೆ ಸಮಸ್ಯೆಗಳು ಹೆಚ್ಚುತ್ತಿವೆ. ಅಭಿವೃದ್ಧಿ ಕಾಮಗಾರಿ ಮಾಡಲು ಆಗುತ್ತಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರ ಮೀಸಲಾತಿ ಸಮಸ್ಯೆ ಬಗೆಹರಿಸಬೇಕುಸುಧಾಕರ ಡಿಗ್ಗಾವಿ ಕೆಂಭಾವಿ ಪುರಸಭೆ ಕಾಂಗ್ರೆಸ್ ಸದಸ್ಯ
ಪುರಸಭೆ ಸದಸ್ಯರಿಗೆ ಸಭೆ ನಡೆಸಲು ಅಧಿಕಾರವಿಲ್ಲದಂತಾಗಿದ್ದು ಎರಡು ವರ್ಷಗಳಾದರೂ ಕಾಮಗಾರಿಗಳ ಅಂದಾಜು ಪಟ್ಟಿ ತಯಾರಿಸಲಾಗುತ್ತಿಲ್ಲಶ್ರೀಧರ ದೇಶಪಾಂಡೆ ಕೆಂಭಾವಿ ಪುರಸಭೆ ಕಾಂಗ್ರೆಸ್ ಸದಸ್ಯ
ಪುರಸಭೆ ಸದಸ್ಯರಿಗೆ ಯಾವುದೇ ಅಧಿಕಾರ ಇಲ್ಲದಿರುವುದರಿಂದ ಅಧಿಕಾರಿಗಳು ನಮ್ಮ ಮಾತನ್ನು ಕೇಳುತ್ತಿಲ್ಲ. ಕೂಡಲೇ ಮೀಸಲಾತಿ ಪ್ರಕಟಿಸಬೇಕುರವಿ ಸೊನ್ನದ ಕೆಂಭಾವಿ ಪುರಸಭೆ ಬಿಜೆಪಿ ಸದಸ್ಯ
ಅಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ವಾರ್ಡ್ ಸಮಸ್ಯೆ ಹೇಳಿದರೂ ಕೆಲಸಗಳು ಆಗುತ್ತಿಲ್ಲ. ಜನರಿಗೆ ಉತ್ತರಿಸುವುದೇ ದೊಡ್ಡ ಸಮಸ್ಯೆಯಾಗಿದೆಗಿರಿಜಾ ಕೊಡಗಾನೂರ ಕೆಂಭಾವಿ ಬಿಜೆಪಿ ಸದಸ್ಯೆ
ಪುರಸಭೆಯಲ್ಲಿ ಮೀಸಲಾತಿ ಸಮಸ್ಯೆಯಿಂದ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಅಭಿವೃದ್ಧಿ ಕುಂಠಿತವಾಗಿದೆ. ಶೀಘ್ರವೇ ಮೀಸಲಾತಿ ಗೊಂದಲ ನಿವಾರಣೆಯಾಗಬೇಕು. ಅಧಿಕಾರಿಗಳು ಅಭಿವೃದ್ಧಿಯತ್ತ ಗಮನ ಹರಿಸುವುದು ಕಡಿಮೆ. ಆಡಳಿತ ಮಂಡಳಿ ಇದ್ದರೆ ಪುರಸಭೆ ವ್ಯಾಪ್ತಿಗೆ ಒಳಪಡುವ ವಾರ್ಡ್ಗಳು ಅಭಿವೃದ್ಧಿಯಾಗುತ್ತವೆರಾಜು ಹವಾಲ್ದಾರ್ ಕಕ್ಕೇರಾ ಪುರಸಭೆ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.