<p>ಕಕ್ಕೇರಾ: 2026ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ ಕಕ್ಕೇರಾ ಉಪ ಪೊಲೀಸ್ ಠಾಣೆಯನ್ನು ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿರುವ ಪ್ರಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಪಟ್ಟಣದ ಉಪ ಪೊಲೀಸ್ ಠಾಣೆಗೆ ಮಂಗಳವಾರ ಭೇಟಿ ನೀಡಿದರು.</p>.<p>ಈ ವೇಳೆ ಗ್ರಾಮಾಡಳಿತಾಧಿಕಾರಿ ಬಸವರಾಜ ಶೆಟ್ಟಿ, ಕೆಪಿಸಿಸಿ ಸದಸ್ಯ ಗುಂಡಪ್ಪ ಸೊಲಾಪೂರ, ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಉಪಾಧ್ಯಕ್ಷ ಜಟ್ಟೆಪ್ಪ ದಳಾರ ಮತ್ತು ಮುಖಂಡರ ಜತೆ ನೂತನ ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಜಾಗದ ಕುರಿತು ಚರ್ಚೆ ನಡೆಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಪಟ್ಟಣದಲ್ಲಿರುವ ಪ್ರಸ್ತುತ ಉಪ ಪೊಲೀಸ್ ಠಾಣೆಯು ಪೊಲೀಸ್ ಠಾಣೆಯನ್ನಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿದ್ದು, ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿಸುವ ಕುರಿತು ಹೊಸ ಕಟ್ಟಡ ನಿರ್ಮಾಣಕ್ಕಾಗಿ 1 ಎಕರೆ ಮತ್ತು ಪೊಲೀಸ್ ವಸತಿ ಗೃಹಗಳಿಗಾಗಿ ಜಾಗದ ಕುರಿತಾಗಿ ಕಂದಾಯ, ಪುರಸಭೆ ಆಡಳಿತ ಮಂಡಳಿ ಮತ್ತು ಮುಖಂಡರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಹುಣಸಗಿ ವೃತ್ತ ಸಿಪಿಐ ರವಿಕುಮಾರ ಎಸ್.ಎನ್., ಕೊಡೇಕಲ ಠಾಣಾಧಿಕಾರಿ ರಾಜಶೇಖರ ರಾಠೋಡ, ಸಿಬ್ಬಂದಿಗಳಾದ ಬೀರಪ್ಪ, ರಾಜು, ವಿನಾಯಕ, ದ್ಯಾವಪ್ಪ ಜಂಪಾ, ಬಸವರಾಜ ಸೇರಿದಂತೆ ಅನೇಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-30-1191448777</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಕ್ಕೇರಾ: 2026ನೇ ಸಾಲಿನ ಬಜೆಟ್ನಲ್ಲಿ ಸರ್ಕಾರ ಕಕ್ಕೇರಾ ಉಪ ಪೊಲೀಸ್ ಠಾಣೆಯನ್ನು ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿರುವ ಪ್ರಯುಕ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃತ್ವಿಕ್ ಶಂಕರ್ ಪಟ್ಟಣದ ಉಪ ಪೊಲೀಸ್ ಠಾಣೆಗೆ ಮಂಗಳವಾರ ಭೇಟಿ ನೀಡಿದರು.</p>.<p>ಈ ವೇಳೆ ಗ್ರಾಮಾಡಳಿತಾಧಿಕಾರಿ ಬಸವರಾಜ ಶೆಟ್ಟಿ, ಕೆಪಿಸಿಸಿ ಸದಸ್ಯ ಗುಂಡಪ್ಪ ಸೊಲಾಪೂರ, ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಉಪಾಧ್ಯಕ್ಷ ಜಟ್ಟೆಪ್ಪ ದಳಾರ ಮತ್ತು ಮುಖಂಡರ ಜತೆ ನೂತನ ಪೊಲೀಸ್ ಠಾಣೆ ನಿರ್ಮಾಣಕ್ಕಾಗಿ ಜಾಗದ ಕುರಿತು ಚರ್ಚೆ ನಡೆಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಪಟ್ಟಣದಲ್ಲಿರುವ ಪ್ರಸ್ತುತ ಉಪ ಪೊಲೀಸ್ ಠಾಣೆಯು ಪೊಲೀಸ್ ಠಾಣೆಯನ್ನಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಿದ್ದು, ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿಸುವ ಕುರಿತು ಹೊಸ ಕಟ್ಟಡ ನಿರ್ಮಾಣಕ್ಕಾಗಿ 1 ಎಕರೆ ಮತ್ತು ಪೊಲೀಸ್ ವಸತಿ ಗೃಹಗಳಿಗಾಗಿ ಜಾಗದ ಕುರಿತಾಗಿ ಕಂದಾಯ, ಪುರಸಭೆ ಆಡಳಿತ ಮಂಡಳಿ ಮತ್ತು ಮುಖಂಡರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಹುಣಸಗಿ ವೃತ್ತ ಸಿಪಿಐ ರವಿಕುಮಾರ ಎಸ್.ಎನ್., ಕೊಡೇಕಲ ಠಾಣಾಧಿಕಾರಿ ರಾಜಶೇಖರ ರಾಠೋಡ, ಸಿಬ್ಬಂದಿಗಳಾದ ಬೀರಪ್ಪ, ರಾಜು, ವಿನಾಯಕ, ದ್ಯಾವಪ್ಪ ಜಂಪಾ, ಬಸವರಾಜ ಸೇರಿದಂತೆ ಅನೇಕರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-30-1191448777</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>