<p>ಹುಣಸಗಿ: ‘ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಉಂಟಾಗುವಂತಾಗಲು ಮನೆಯಲ್ಲಿ ಧನಾತ್ಮಕ ಶಕ್ತಿ ಬೇಕು. ಅದಕ್ಕೆ ಧ್ಯಾನವೇ ಮುಖ್ಯ ಕಾರಣ’ ಎಂದು ಕಲಬುರಗಿಯ ವಿಜಯಾ ಅಕ್ಕ ಹೇಳಿದರು.</p>.<p>ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪಟ್ಟಣ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮದ್ಯಪಾನ- ಧೂಮಪಾನ, ಮಾದಕ ವಸ್ತುಗಳ ಸೇವನೆ ಹಾಗೂ ಅಭ್ಯಾಸದಿಂದಾಗಿ ಸಮಾಜದ ಶಾಂತಿ, ಆರೋಗ್ಯ ಅಲ್ಲದೆ ಕುಟುಂಬದ ಏಕತೆಯನ್ನು ಹಾಳುಮಾಡುತ್ತದೆ. ದಿನಕಳೆದಂತೆ ವ್ಯಸನದಿಂದಾಗಿ ಮನೆಗಳು ಸಂಕಷ್ಟಕ್ಕೆ ಸಿಲುಕುತ್ತವೆ’ ಎಂದರು.</p>.<p>ಸಮಾಜ ಸೇವಾ ವಿಭಾಗದ ಬಿ.ಕೆ. ಪ್ರೇಮ ಅಣ್ಣ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಸ್.ಬಿ.ಪಾಟೀಲ, ಶಿವಲೀಲಾ ಅಕ್ಕ, ಶಾಂತ ಅಕ್ಕ, ಉಷಾ ಅಕ್ಕ ಹಾಗೂ ಚಂದ್ರಶೇಖರ ದಂಡಿನ್, ಬಸವರಾಜಸ್ವಾಮಿ ಸ್ಥಾವರಮಠ, ಬಸವರಾಜ ಮಲಗಲದಿನ್ನಿ, ನಾಗಪ್ಪ ಅಡಿಕ್ಯಾಳ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-30-856744865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ‘ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಉಂಟಾಗುವಂತಾಗಲು ಮನೆಯಲ್ಲಿ ಧನಾತ್ಮಕ ಶಕ್ತಿ ಬೇಕು. ಅದಕ್ಕೆ ಧ್ಯಾನವೇ ಮುಖ್ಯ ಕಾರಣ’ ಎಂದು ಕಲಬುರಗಿಯ ವಿಜಯಾ ಅಕ್ಕ ಹೇಳಿದರು.</p>.<p>ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪಟ್ಟಣ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮದ್ಯಪಾನ- ಧೂಮಪಾನ, ಮಾದಕ ವಸ್ತುಗಳ ಸೇವನೆ ಹಾಗೂ ಅಭ್ಯಾಸದಿಂದಾಗಿ ಸಮಾಜದ ಶಾಂತಿ, ಆರೋಗ್ಯ ಅಲ್ಲದೆ ಕುಟುಂಬದ ಏಕತೆಯನ್ನು ಹಾಳುಮಾಡುತ್ತದೆ. ದಿನಕಳೆದಂತೆ ವ್ಯಸನದಿಂದಾಗಿ ಮನೆಗಳು ಸಂಕಷ್ಟಕ್ಕೆ ಸಿಲುಕುತ್ತವೆ’ ಎಂದರು.</p>.<p>ಸಮಾಜ ಸೇವಾ ವಿಭಾಗದ ಬಿ.ಕೆ. ಪ್ರೇಮ ಅಣ್ಣ ಮಾತನಾಡಿದರು.</p>.<p>ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಸ್.ಬಿ.ಪಾಟೀಲ, ಶಿವಲೀಲಾ ಅಕ್ಕ, ಶಾಂತ ಅಕ್ಕ, ಉಷಾ ಅಕ್ಕ ಹಾಗೂ ಚಂದ್ರಶೇಖರ ದಂಡಿನ್, ಬಸವರಾಜಸ್ವಾಮಿ ಸ್ಥಾವರಮಠ, ಬಸವರಾಜ ಮಲಗಲದಿನ್ನಿ, ನಾಗಪ್ಪ ಅಡಿಕ್ಯಾಳ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-30-856744865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>