<p><strong>ಶಹಾಪುರ:</strong> ‘ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತೆ ಮಮತಾ ನಾಯಕ ಹೇಳಿದರು.</p>.<p>ತಾಲ್ಲೂಕಿನ ಚಂದಾಪುರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ‘ಶಾಲಾ ಪ್ರಾರಂಭೋತ್ಸವ’ ಅಂಗವಾಗಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ ಪಾರಶೆಟ್ಟಿ ಮಾತನಾಡಿ, ‘ಶಾಲೆಯ ಆರಂಭದಲ್ಲಿಯೇ ವರ್ಷದ ಯೋಜನೆಗಳನ್ನು ಮುಖ್ಯ ಶಿಕ್ಷಕರು ತಯಾರಿಸಿಕೊಂಡು, ಎಲ್ಲ ಶಿಕ್ಷಕರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ. ಶಿಕ್ಷಕರು ಸೇತುಬಂಧ ಕಾರ್ಯಕ್ರಮವನ್ನು ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>ತಾಪಂ ಇಒ ಬಸವರಾಜ ಶರಬೈ, ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷ ಶಾಂತಗೌಡ ಪಾಟೀಲ, ಸಿದ್ದಣ ಮಾನಸೂಣಗಿ, ಬಸವರಾಜ ಯಾಳಗಿ, ನಾಗರಾಜ, ರಾಮನಗೌಡ ಖಾನಾಪುರ, ರಮೇಶ ಚವ್ಹಾಣ, ಎಸ್ಡಿಎಂಸಿ ಅಧ್ಯಕ್ಷ ನಾನಗೌಡ ಭಾಗವಹಿಸಿದ್ದರು.</p>.<p>ಮೆರವಣಿಗೆ: ‘ಶಾಲಾ ಪ್ರಾರಂಭೋತ್ಸವ’ದ ಅಂಗವಾಗಿ ಶಾಲೆಯನ್ನು ತಳಿರು-ತೋರಣ, ರಂಗೋಲಿಗಳಿಂದ ಸಿಂಗಾರ ಮಾಡಿ, ಊರಿನ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ ಮತ್ತು ಡೊಳ್ಳು ವಾದ್ಯಗಳ ಮೂಲಕ ಮೆರವಣಿಗೆಯೊಂದಿಗೆ ಮಕ್ಕಳನ್ನು ಶಾಲೆಗೆ ಕರೆತಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-30-1427521356</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ:</strong> ‘ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದೆ. ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತೆ ಮಮತಾ ನಾಯಕ ಹೇಳಿದರು.</p>.<p>ತಾಲ್ಲೂಕಿನ ಚಂದಾಪುರ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ‘ಶಾಲಾ ಪ್ರಾರಂಭೋತ್ಸವ’ ಅಂಗವಾಗಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ ಪಾರಶೆಟ್ಟಿ ಮಾತನಾಡಿ, ‘ಶಾಲೆಯ ಆರಂಭದಲ್ಲಿಯೇ ವರ್ಷದ ಯೋಜನೆಗಳನ್ನು ಮುಖ್ಯ ಶಿಕ್ಷಕರು ತಯಾರಿಸಿಕೊಂಡು, ಎಲ್ಲ ಶಿಕ್ಷಕರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದಾರೆ. ಶಿಕ್ಷಕರು ಸೇತುಬಂಧ ಕಾರ್ಯಕ್ರಮವನ್ನು ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>ತಾಪಂ ಇಒ ಬಸವರಾಜ ಶರಬೈ, ತಾಲ್ಲೂಕು ಶಿಕ್ಷಣ ಸುಧಾರಣಾ ಸಮಿತಿಯ ಅಧ್ಯಕ್ಷ ಶಾಂತಗೌಡ ಪಾಟೀಲ, ಸಿದ್ದಣ ಮಾನಸೂಣಗಿ, ಬಸವರಾಜ ಯಾಳಗಿ, ನಾಗರಾಜ, ರಾಮನಗೌಡ ಖಾನಾಪುರ, ರಮೇಶ ಚವ್ಹಾಣ, ಎಸ್ಡಿಎಂಸಿ ಅಧ್ಯಕ್ಷ ನಾನಗೌಡ ಭಾಗವಹಿಸಿದ್ದರು.</p>.<p>ಮೆರವಣಿಗೆ: ‘ಶಾಲಾ ಪ್ರಾರಂಭೋತ್ಸವ’ದ ಅಂಗವಾಗಿ ಶಾಲೆಯನ್ನು ತಳಿರು-ತೋರಣ, ರಂಗೋಲಿಗಳಿಂದ ಸಿಂಗಾರ ಮಾಡಿ, ಊರಿನ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ ಮತ್ತು ಡೊಳ್ಳು ವಾದ್ಯಗಳ ಮೂಲಕ ಮೆರವಣಿಗೆಯೊಂದಿಗೆ ಮಕ್ಕಳನ್ನು ಶಾಲೆಗೆ ಕರೆತಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-30-1427521356</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>