ಕುಮಾರಸ್ವಾಮಿ ಅವರು ಇಂಧನ ಸಚಿವ ಪೀಯೂಷ್ ಗೋಯಲ್ ಅವರಿಗೂ ಪತ್ರ ಬರೆದು ಭೇಟಿಗೆ ಸಮಯ ಕೋರಿದ್ದಾರೆ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದ್ದು ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಹೆಚ್ಚಿನ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಹಾಗೂ ಕಲ್ಲಿದ್ದಲು ಗಣಿ ಹಂಚಿಕೆ ಮಾಡುವಂತೆ ಗೋಯಲ್ ಭೇಟಿಯ ವೇಳೆ ಮುಖ್ಯಮಂತ್ರಿ ಮನವಿ ಮಾಡಲಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.