<p><strong>ಸುರಪುರ</strong>: ‘ಅನೇಕ ಮಹನೀಯರ ಹೋರಾಟದ ಫಲವಾಗಿ ಹೈದರಾಬಾದ್ ನಿಜಾಮರ ಆಳ್ವಿಕೆಯ ಭಾಗವಾದ ಆರು ಜಿಲ್ಲೆಗಳು ಸ್ವಾತಂತ್ರ್ಯ ಪಡೆಯಲು ಒಂದು ವರ್ಷ ಹೆಚ್ಚು ಕಾಯಬೇಕಾಯಿತು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.</p>.<p>ಇಲ್ಲಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಸರ್ದಾರ್ ವಲ್ಲಭಭಾಯಿ ಪಟೇಲರು ದಿಟ್ಟತನದಿಂದ ಕೈಗೊಂಡ ಸೇನಾ ಕಾರ್ಯಾಚರಣೆಯಲ್ಲಿ, ನಿಜಾಮ ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ ಹೈದರಾಬಾದ್ ಕರ್ನಾಟಕ 1948 ಸೆ. 17 ರಂದು ವಿಮೋಚನೆಯಾಯಿತು’ ಎಂದರು.</p>.<p>‘ದೇಶದ ಸಮಗ್ರತೆಯ ದೃಷ್ಟಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರು ಹೈದರಾಬಾದ್ ಸಂಸ್ಥಾನದ ನಿಜಾಮನನ್ನು ಮಣಿಸಿ ಈ ಭಾಗಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟಿದ್ದಾರೆ. ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿಮೋಚನಾ ಹೋರಾಟದಲ್ಲಿ ಸುರಪುರ ಸಂಸ್ಥಾನದ ಅರಸರ ಪಾತ್ರ ಕೂಡ ಅಮೋಘವಾಗಿದೆ. ಈ ಭಾಗದ ಅನೇಕರು ಈ ಹೋರಾಟದಲ್ಲಿ ಭಾಗಿಯಾಗಿದ್ದರು’ ಎಂದರು.</p>.<p>ತಹಶೀಲ್ದಾರ್ ಎಚ್.ಎ.ಸರಕಾವಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ವೇಣುಗೋಪಾಲ ನಾಯಕ ಜೇವರ್ಗಿ ಉಪನ್ಯಾಸ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡನಾಯಕ (ತಾತಾ), ತಾಲ್ಲೂಕು ಪಂಚಾಯಿತಿ ಇ.ಓ. ಬಸವರಾಜ ಸಜ್ಜನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ಗುತ್ತೇದಾರ್, ಟಿಎಚ್ಒ ಡಾ. ಆರ್.ವಿ.ನಾಯಕ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ವೇದಿಕೆಯಲ್ಲಿದ್ದರು.</p>.<p>ಯೂತ್ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ರಾಜಾ ಕುಮಾರನಾಯಕ, ಯುವ ಮುಖಂಡ ರಾಜಾ ಸಂತೋಷನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.</p>.<p>ಹಣಮಂತ್ರಾಯ ಚೌಡೇಶ್ವರಹಾಳ ಸ್ವಾಗತಿಸಿದರು. ಮಹಾದೇವ ಎಚ್.ಜಿ. ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಅನೇಕ ಮಹನೀಯರ ಹೋರಾಟದ ಫಲವಾಗಿ ಹೈದರಾಬಾದ್ ನಿಜಾಮರ ಆಳ್ವಿಕೆಯ ಭಾಗವಾದ ಆರು ಜಿಲ್ಲೆಗಳು ಸ್ವಾತಂತ್ರ್ಯ ಪಡೆಯಲು ಒಂದು ವರ್ಷ ಹೆಚ್ಚು ಕಾಯಬೇಕಾಯಿತು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.</p>.<p>ಇಲ್ಲಿಯ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಸರ್ದಾರ್ ವಲ್ಲಭಭಾಯಿ ಪಟೇಲರು ದಿಟ್ಟತನದಿಂದ ಕೈಗೊಂಡ ಸೇನಾ ಕಾರ್ಯಾಚರಣೆಯಲ್ಲಿ, ನಿಜಾಮ ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ ಹೈದರಾಬಾದ್ ಕರ್ನಾಟಕ 1948 ಸೆ. 17 ರಂದು ವಿಮೋಚನೆಯಾಯಿತು’ ಎಂದರು.</p>.<p>‘ದೇಶದ ಸಮಗ್ರತೆಯ ದೃಷ್ಟಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರು ಹೈದರಾಬಾದ್ ಸಂಸ್ಥಾನದ ನಿಜಾಮನನ್ನು ಮಣಿಸಿ ಈ ಭಾಗಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಟ್ಟಿದ್ದಾರೆ. ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ವಿಮೋಚನಾ ಹೋರಾಟದಲ್ಲಿ ಸುರಪುರ ಸಂಸ್ಥಾನದ ಅರಸರ ಪಾತ್ರ ಕೂಡ ಅಮೋಘವಾಗಿದೆ. ಈ ಭಾಗದ ಅನೇಕರು ಈ ಹೋರಾಟದಲ್ಲಿ ಭಾಗಿಯಾಗಿದ್ದರು’ ಎಂದರು.</p>.<p>ತಹಶೀಲ್ದಾರ್ ಎಚ್.ಎ.ಸರಕಾವಸ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ವೇಣುಗೋಪಾಲ ನಾಯಕ ಜೇವರ್ಗಿ ಉಪನ್ಯಾಸ ನೀಡಿದರು.</p>.<p>ನಗರಸಭೆ ಅಧ್ಯಕ್ಷೆ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡನಾಯಕ (ತಾತಾ), ತಾಲ್ಲೂಕು ಪಂಚಾಯಿತಿ ಇ.ಓ. ಬಸವರಾಜ ಸಜ್ಜನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ್ ಗುತ್ತೇದಾರ್, ಟಿಎಚ್ಒ ಡಾ. ಆರ್.ವಿ.ನಾಯಕ, ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ವೇದಿಕೆಯಲ್ಲಿದ್ದರು.</p>.<p>ಯೂತ್ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ರಾಜಾ ಕುಮಾರನಾಯಕ, ಯುವ ಮುಖಂಡ ರಾಜಾ ಸಂತೋಷನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.</p>.<p>ಹಣಮಂತ್ರಾಯ ಚೌಡೇಶ್ವರಹಾಳ ಸ್ವಾಗತಿಸಿದರು. ಮಹಾದೇವ ಎಚ್.ಜಿ. ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>