ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈ.ಕ ವಿಶೇಷ ಕೋಶ ಕಲಬುರಗಿಗೆ: ಸಿ.ಎಂ ಬೊಮ್ಮಾಯಿ

Last Updated 24 ಡಿಸೆಂಬರ್ 2021, 2:35 IST
ಅಕ್ಷರ ಗಾತ್ರ

ಸೈದಾಪುರ: ‘ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನದಲ್ಲಿರುವ ಹೈದರಾಬಾದ್ ಕರ್ನಾಟಕ ವಿಶೇಷ ಕೋಶವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧೀನಕ್ಕೆ ಒಳಪಡಿಸಿ, ಕೇಂದ್ರ ಸ್ಥಾನವಾದ ಕಲಬುರಗಿಗೆ ಸ್ಥಳಾಂತರಿಸಲು ಆದೇಶಿಸಿಲಾಗಿದೆ’ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಡಾ.ಸಾಬಣ್ಣ ತಳವಾರ ಅವರು ವಿಧಾನಸಭೆ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದ್ದಾರೆ.

‘ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಸಂವಿಧಾನ ತಿದ್ದುಪಡಿ 371(ಜೆ) ಅಡಿಯ ವಿಶೇಷ ಕೋಶವನ್ನು ಬೆಂಗಳೂರಿನಿಂದ ಕಲಬುರಗಿಗೆ ಸ್ಥಳಾಂತರರಿಸಿ, ಈ ಭಾಗದ ಜನರ ಅಲೆದಾಟ ತಪ್ಪಿಸಬೇಕು.ದಶಕ ಕಳೆದರೂ ಈ ಬೇಡಿಕೆ ಈಡೇರಿಲ್ಲ. ಕಚೇರಿ ಸ್ಥಳಾಂತರಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ’ ಎಂದು ಸಾಬಣ್ಣ ಅವರು ಸದನದಲ್ಲಿ ಪ್ರಶ್ನಿಸಿದ್ದರು.

ಇದಕ್ಕೆ ಲಿಖಿತ ಉತ್ತರ ನೀಡಿದ ಮುಖ್ಯಮಂತ್ರಿ, ಕಚೇರಿ ಸ್ಥಳಾಂತರ ಮಾಡಿದ್ದನ್ನು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT