<p><strong>ಸುರಪುರ:</strong>‘ಚಂಚಲ ಮನಸ್ಸಿಗೆ ನೆಮ್ಮದಿ ನೀಡಿ ಸಂತೋಷದ ಉನ್ಮಾದ ನೀಡುವ ಶಕ್ತಿ ಸಂಗೀತಕ್ಕೆ ಇದೆ. ಸಂಗೀತವನ್ನು ಈಗ ಚಿಕಿತ್ಸೆಯ ರೂಪದಲ್ಲೂ ಬಳಸಲಾಗುತ್ತದೆ’ ಎಂದು ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ಹೇಳಿದರು.</p>.<p>ರಂಗಂಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ಸಗರನಾಡು ಕಲಾ ವೇದಿಕೆ ರುಕ್ಮಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೃಷ್ಣ ಸುಬೇದಾರ ಮಾತನಾಡಿ, ‘ಸಂಗೀತ ಆಲಿಸುವುದರಿಂದ ಮನಸ್ಸಿಗೆ ಹಿತ ಎನಿಸುತ್ತದೆ. ಸಂಗೀತ ಕಲಿಯುವ ಮಕ್ಕಳ ಕಲಿಕೆ ಉತ್ತಮವಾಗಿರುತ್ತದೆ’ ಎಂದರು.</p>.<p>ಜಿಲ್ಲಾ ಕಸಾಪ ಅಧ್ಯಕ್ಷ ಶರಣಬಸವ ಯಾಳವಾರ, ಉದ್ಯಮಿ ಸುಗೂರೇಶ ಮಡ್ಡಿ ಮಾತನಾಡಿದರು. ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಶಿವಶರಣಯ್ಯ ಲಿಂಗದಳ್ಳಿ, ಶಿವಲಿಂಗಯ್ಯಸ್ವಾಮಿ ಬಳ್ಳುಂಡಗಿಮಠ, ರಮೇಶ ಕುಲಕರ್ಣಿ, ಮಲ್ಲಪ್ಪ ಹೂಗಾರ ಅವರಿಗೆ ಸಂಗೀತ ಸೇವೆಯಲ್ಲಿ ಸಾಧನೆ ಮಾಡಿದ್ದಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಶ್ರೀಹರಿರಾವ ಆದವಾನಿ ಸ್ವಾಗತಿಸಿದರು. ವೇದಿಕೆಯ ಅಧ್ಯಕ್ಷ ರಾಜಶೇಖರ ಗೆಜ್ಜಿ ಪ್ರಾಸ್ತಾವಿಕ ಮಾತನಾಡಿದರು. ಮಂಜುನಾಥ ಚಟ್ಟಿ ನಿರೂಪಿಸಿದರು. ನಂತರ ಶಿವಶರಣಯ್ಯಸ್ವಾಮಿ ಬಳ್ಳುಂಡಗಿಮಠ ಅವರ ಅಧ್ಯಕ್ಷತೆಯಲ್ಲಿ ಕಲಾವಿದರಿಂದ ಸಂಗೀತೋತ್ಸವ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong>‘ಚಂಚಲ ಮನಸ್ಸಿಗೆ ನೆಮ್ಮದಿ ನೀಡಿ ಸಂತೋಷದ ಉನ್ಮಾದ ನೀಡುವ ಶಕ್ತಿ ಸಂಗೀತಕ್ಕೆ ಇದೆ. ಸಂಗೀತವನ್ನು ಈಗ ಚಿಕಿತ್ಸೆಯ ರೂಪದಲ್ಲೂ ಬಳಸಲಾಗುತ್ತದೆ’ ಎಂದು ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ಹೇಳಿದರು.</p>.<p>ರಂಗಂಪೇಟೆಯ ಬನಶಂಕರಿ ದೇವಸ್ಥಾನದಲ್ಲಿ ಸಗರನಾಡು ಕಲಾ ವೇದಿಕೆ ರುಕ್ಮಾಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕೃಷ್ಣ ಸುಬೇದಾರ ಮಾತನಾಡಿ, ‘ಸಂಗೀತ ಆಲಿಸುವುದರಿಂದ ಮನಸ್ಸಿಗೆ ಹಿತ ಎನಿಸುತ್ತದೆ. ಸಂಗೀತ ಕಲಿಯುವ ಮಕ್ಕಳ ಕಲಿಕೆ ಉತ್ತಮವಾಗಿರುತ್ತದೆ’ ಎಂದರು.</p>.<p>ಜಿಲ್ಲಾ ಕಸಾಪ ಅಧ್ಯಕ್ಷ ಶರಣಬಸವ ಯಾಳವಾರ, ಉದ್ಯಮಿ ಸುಗೂರೇಶ ಮಡ್ಡಿ ಮಾತನಾಡಿದರು. ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.</p>.<p>ಶಿವಶರಣಯ್ಯ ಲಿಂಗದಳ್ಳಿ, ಶಿವಲಿಂಗಯ್ಯಸ್ವಾಮಿ ಬಳ್ಳುಂಡಗಿಮಠ, ರಮೇಶ ಕುಲಕರ್ಣಿ, ಮಲ್ಲಪ್ಪ ಹೂಗಾರ ಅವರಿಗೆ ಸಂಗೀತ ಸೇವೆಯಲ್ಲಿ ಸಾಧನೆ ಮಾಡಿದ್ದಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಶ್ರೀಹರಿರಾವ ಆದವಾನಿ ಸ್ವಾಗತಿಸಿದರು. ವೇದಿಕೆಯ ಅಧ್ಯಕ್ಷ ರಾಜಶೇಖರ ಗೆಜ್ಜಿ ಪ್ರಾಸ್ತಾವಿಕ ಮಾತನಾಡಿದರು. ಮಂಜುನಾಥ ಚಟ್ಟಿ ನಿರೂಪಿಸಿದರು. ನಂತರ ಶಿವಶರಣಯ್ಯಸ್ವಾಮಿ ಬಳ್ಳುಂಡಗಿಮಠ ಅವರ ಅಧ್ಯಕ್ಷತೆಯಲ್ಲಿ ಕಲಾವಿದರಿಂದ ಸಂಗೀತೋತ್ಸವ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>