ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಭಾವೈಕ್ಯತಾ ಸಮಿತಿ ಹಾಗೂ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯೋತ್ಸವದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಬಹುಭಾಷೆ, ಧರ್ಮ ಮತ್ತು ಬಹು ಸಂಸ್ಕೃತಿಗಳ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆ, ವಿವಿಧ ಕ್ಷೇತ್ರಗಳ ಪರಿಣಿತರನ್ನು ಹೊಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಆದ ಹಿರಿಮೆಯನ್ನು ಗಳಿಸಿಕೊಂಡಿದೆ ಎಂದರು.