<p><strong>ಯಾದಗಿರಿ: </strong>ಜಿಲ್ಲೆಯ ಸುರಪುರ ತಾಲ್ಲೂಕಿನ ಪ್ರಸಿದ್ಧ ಕಣ್ವಮಠ ಪೀಠಾಧಿಪತಿವಿದ್ಯಾವಾರೀಧಿತೀರ್ಥರು ಅನೈತಿಕಸಂಬಂಧ ಇಟ್ಟಿಕೊಂಡಿದ್ದಾರೆ ಎನ್ನಲಾದ ಅಡಿಯೊ ಮತ್ತು ವಿಡಿಯೊ ಬಿಡುಗಡೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.</p>.<p>ಸ್ವಾಮೀಜಿ ಮೈಸೂರು ಮೂಲದ ಮಹಿಳೆ ಜೊತೆ ಅಸಭ್ಯಕರವಾಗಿ ವಾಟ್ಸ್ಆ್ಯಪ್ ನಲ್ಲಿ ಚಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಮಹಿಳೆ ಜೊತೆ ಸ್ವಾಮೀಜಿ ನಡೆಸಿರುವ ಚಾಟಿಂಗ್ ನ ಫೋಟೋಗಳು, ವಿಡಿಯೊಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಯಿಂದ ಹೊರ ಬಂದಿವೆ.</p>.<p>ಅಲ್ಲದೆ ಈ ಸ್ವಾಮೀಜಿಗೆ ಈಗಾಗಲೇ ಎರಡು ಮದುವೆ ಆಗಿದ್ದು, ಮಕ್ಕಳು ಸಹ ಇದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಹಲವು ಜಿಲ್ಲೆಗಳಲ್ಲಿರುವ ಕಣ್ವ ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಸಹ ಇವರ ಮೇಲಿದೆ. ವಿರೋಧದ ಮಧ್ಯೆಯೂ 2014 ರಲ್ಲಿ ಪೀಠವನ್ನು ಅಲಂಕರಿಸಿದ್ದರು.</p>.<p>ಪೂಜೆ ನೆಪದಲ್ಲಿ ಬೆಂಗಳೂರಿನ ಯಲಹಂಕ ಶಾಖಾ ಮಠಕ್ಕೆ ಬರುವಂತೆ ಮಹಿಳೆಗೆ ಆಹ್ವಾನಿಸಿರುವುದು ಆಡಿಯೊದಲ್ಲಿದೆ.</p>.<p><strong>ಹನಿ ಟ್ರ್ಯಾಪ್ ಶಂಕೆ?</strong><br />ಸ್ವಾಮೀಜಿ ಮಹಿಳೆ ಜೊತೆ ಮಾತನಾಡಿದ ಆಡಿಯೊ ಇಟ್ಟುಕೊಂಡು ಮಹಿಳೆಯ ಪತಿ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಇದು ಇನ್ನಷ್ಟೆ ಬೆಳಕಿಗೆ ಬರಬೇಕಿದೆ.</p>.<p><strong>ಪೀಠ ತ್ಯಜಿಸುವೇ ಎಂದ ಸ್ವಾಮೀಜಿ:</strong> ಮಠದ ಅಭಿವೃದ್ಧಿ ಸಹಿಸದ ಕೆಲವರು ಈ ರೀತಿ ಮಾನಹರಣ ಮಾಡುತ್ತಿದ್ದಾರೆ. ನಮ್ಮ ಮೇಲೆ ಆರೋಪ ಬಂದಿದ್ದರಿಂದ ಪೀಠ ತ್ಯಜಿಸುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾರೆ.</p>.<p>ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಗುರುಗಳಿಗೂ ಇದೇ ರೀತಿ ಪತ್ರ ವ್ಯವಹಾರ ಮಾಡಿ ಪೀಠದಿಂದ ಇಳಿಸಲು ಪ್ರಯತ್ನಿಸಲಾಗಿತ್ತು ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲೆಯ ಸುರಪುರ ತಾಲ್ಲೂಕಿನ ಪ್ರಸಿದ್ಧ ಕಣ್ವಮಠ ಪೀಠಾಧಿಪತಿವಿದ್ಯಾವಾರೀಧಿತೀರ್ಥರು ಅನೈತಿಕಸಂಬಂಧ ಇಟ್ಟಿಕೊಂಡಿದ್ದಾರೆ ಎನ್ನಲಾದ ಅಡಿಯೊ ಮತ್ತು ವಿಡಿಯೊ ಬಿಡುಗಡೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ.</p>.<p>ಸ್ವಾಮೀಜಿ ಮೈಸೂರು ಮೂಲದ ಮಹಿಳೆ ಜೊತೆ ಅಸಭ್ಯಕರವಾಗಿ ವಾಟ್ಸ್ಆ್ಯಪ್ ನಲ್ಲಿ ಚಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು, ಮಹಿಳೆ ಜೊತೆ ಸ್ವಾಮೀಜಿ ನಡೆಸಿರುವ ಚಾಟಿಂಗ್ ನ ಫೋಟೋಗಳು, ವಿಡಿಯೊಗಳು ಮತ್ತು ಕಾಲ್ ರೆಕಾರ್ಡ್ ಅನಾಮಧೇಯ ವ್ಯಕ್ತಿಯಿಂದ ಹೊರ ಬಂದಿವೆ.</p>.<p>ಅಲ್ಲದೆ ಈ ಸ್ವಾಮೀಜಿಗೆ ಈಗಾಗಲೇ ಎರಡು ಮದುವೆ ಆಗಿದ್ದು, ಮಕ್ಕಳು ಸಹ ಇದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ ಹಲವು ಜಿಲ್ಲೆಗಳಲ್ಲಿರುವ ಕಣ್ವ ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪ ಸಹ ಇವರ ಮೇಲಿದೆ. ವಿರೋಧದ ಮಧ್ಯೆಯೂ 2014 ರಲ್ಲಿ ಪೀಠವನ್ನು ಅಲಂಕರಿಸಿದ್ದರು.</p>.<p>ಪೂಜೆ ನೆಪದಲ್ಲಿ ಬೆಂಗಳೂರಿನ ಯಲಹಂಕ ಶಾಖಾ ಮಠಕ್ಕೆ ಬರುವಂತೆ ಮಹಿಳೆಗೆ ಆಹ್ವಾನಿಸಿರುವುದು ಆಡಿಯೊದಲ್ಲಿದೆ.</p>.<p><strong>ಹನಿ ಟ್ರ್ಯಾಪ್ ಶಂಕೆ?</strong><br />ಸ್ವಾಮೀಜಿ ಮಹಿಳೆ ಜೊತೆ ಮಾತನಾಡಿದ ಆಡಿಯೊ ಇಟ್ಟುಕೊಂಡು ಮಹಿಳೆಯ ಪತಿ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಇದು ಇನ್ನಷ್ಟೆ ಬೆಳಕಿಗೆ ಬರಬೇಕಿದೆ.</p>.<p><strong>ಪೀಠ ತ್ಯಜಿಸುವೇ ಎಂದ ಸ್ವಾಮೀಜಿ:</strong> ಮಠದ ಅಭಿವೃದ್ಧಿ ಸಹಿಸದ ಕೆಲವರು ಈ ರೀತಿ ಮಾನಹರಣ ಮಾಡುತ್ತಿದ್ದಾರೆ. ನಮ್ಮ ಮೇಲೆ ಆರೋಪ ಬಂದಿದ್ದರಿಂದ ಪೀಠ ತ್ಯಜಿಸುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾರೆ.</p>.<p>ನಮ್ಮ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಗುರುಗಳಿಗೂ ಇದೇ ರೀತಿ ಪತ್ರ ವ್ಯವಹಾರ ಮಾಡಿ ಪೀಠದಿಂದ ಇಳಿಸಲು ಪ್ರಯತ್ನಿಸಲಾಗಿತ್ತು ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>