<p><strong>ಯಾದಗಿರಿ:</strong> ಜಿಲ್ಲೆಯ ವಿವಿಧೆಡೆ ರೈತರ ಮುಂಗಾರಿನ ಮೊದಲ ಹಬ್ಬ ಕಾರಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ರೈತರು ತಮ್ಮ ಎತ್ತು, ಹಸುಗಳಿಗೆ ಹಳ್ಳ, ಕೆರೆ, ನದಿ ದಂಡೆಗಳಲ್ಲಿ ಸ್ನಾನ ಮಾಡಿಸಿ ವಿವಿಧ ಬಗೆಯ ಅಲಂಕಾರ ಮಾಡಿದರು.</p>.<p>ತಲೆಗೆ ಹೂವಿನ ಗೊಂಡೆ, ಕೊರಳಿಗೆ ಗೆಜ್ಜೆ, ಟೊಂಕಕ್ಕೆ ಕಪ್ಪುದಾರ, ಕೋಡಿಗೆ ಬಣ್ಣ, ದೇಹಕ್ಕೆ ಕೆಂಪು, ಹಳದಿ ಬಣ್ಣ ಹಚ್ಚಿ, ಶೃಂಗಾರಗೊಳಿಸಿ, ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಕುಣಿದು, ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ಸಂಜೆ ವೇಳೆ ರೈತರು ಎತ್ತುಗಳಿಂದ ಕರಿ ಹರಿಯುವ ಮೂಲಕ ಕಾರ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು. ಮುಂಗಾರು ಮಳೆ ಆಗಾಗ ಸಿಂಚನವಾಗುತ್ತಿದ್ದು, ಹೊಲಗಳಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹೀಗಾಗಿ ಗುರುವಾರ ಬಿಡುವು ನೀಡಿ ರೈತಾಪಿ ವರ್ಗ ಖುಷಿ ಪಟ್ಟರು.</p>.<p><strong>ವಿಡಿಯೊ ನೋಡಿ</strong></p>.<p>ಯರಗೋಳ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾರಹುಣ್ಣಿಮೆ ಅಂಗವಾಗಿ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಿದರು. ಯುವಕರು ಎತ್ತುಗಳ ಜೊತೆಯಲ್ಲಿ ಕುಣಿದು ಕುಪ್ಪಳಿಸಿದರು. ಹಿರಿಯರು ಜನಪದ ಹಾಡುಗಳು ಹಾಡಿದರು. ಮೆರವಣಿಗೆಯನ್ನು ವೀಕ್ಷಿಸಲು ನೂರಾರು ಸಂಖ್ಯೆಯ ಜನರು ಸೇರಿದ್ದರು.</p>.<p>ಟೆಂಗಿನಕಾಯಿ ಒಡೆದು, ನೈವೇದ್ಯ ಅರ್ಪಿಸಿ, ಭಕ್ತಿ ಸಮರ್ಪಿಸಿದರು. ಯುವತಿಯರು ಹೊಸ ಸೀರೆ ಉಟ್ಟು ಆರತಿ ಬೆಳಗಿದರು.</p>.<p>ಯರಗೋಳ, ಅಲ್ಲಿಪುರ, ಹೆಡಗಿಮದ್ರ, ಹೊನಗೇರಾ, ಹತ್ತಿಕುಣಿ, ಬಂದಳ್ಳಿ, ಯಡ್ಡಳ್ಳಿ, ಚಾಮನಳ್ಳಿ, ಬೆಳಗೇರಾ, ಖಾನಳ್ಳಿ, ಬಸವಂತಪುರ, ಕ್ಯಾಸಪನಳ್ಳಿ, ಹೋರುಂಚಾ, ಅಚ್ಚೋಲ, ಮುದ್ನಾಳ, ಮಲಕಪ್ಪನಳ್ಳಿ, ಕಂಚಗಾರಳ್ಳಿ, ಅಬ್ಬೆತುಮಕೂರು, ಬಾಚವಾರ, ಬೊಮ್ಮಚಟ್ನಳ್ಳಿ, ಸಮಣಪುರ ಗ್ರಾಮಗಳಲ್ಲಿ ಕಾರ ಹುಣ್ಣಿಮೆ ಸಂಭ್ರಮ ಜೋರಾಗಿತ್ತು.</p>.<p><a href="https://www.prajavani.net/india-news/patient-bitten-by-rat-in-hospital-dies-investigation-841938.html" itemprop="url">ಮುಂಬೈ: ಇಲಿ ಕಚ್ಚಿ ರೋಗಿಯ ಸಾವು, ತನಿಖೆಗೆ ಆದೇಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯ ವಿವಿಧೆಡೆ ರೈತರ ಮುಂಗಾರಿನ ಮೊದಲ ಹಬ್ಬ ಕಾರಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ರೈತರು ತಮ್ಮ ಎತ್ತು, ಹಸುಗಳಿಗೆ ಹಳ್ಳ, ಕೆರೆ, ನದಿ ದಂಡೆಗಳಲ್ಲಿ ಸ್ನಾನ ಮಾಡಿಸಿ ವಿವಿಧ ಬಗೆಯ ಅಲಂಕಾರ ಮಾಡಿದರು.</p>.<p>ತಲೆಗೆ ಹೂವಿನ ಗೊಂಡೆ, ಕೊರಳಿಗೆ ಗೆಜ್ಜೆ, ಟೊಂಕಕ್ಕೆ ಕಪ್ಪುದಾರ, ಕೋಡಿಗೆ ಬಣ್ಣ, ದೇಹಕ್ಕೆ ಕೆಂಪು, ಹಳದಿ ಬಣ್ಣ ಹಚ್ಚಿ, ಶೃಂಗಾರಗೊಳಿಸಿ, ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಕುಣಿದು, ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ಸಂಜೆ ವೇಳೆ ರೈತರು ಎತ್ತುಗಳಿಂದ ಕರಿ ಹರಿಯುವ ಮೂಲಕ ಕಾರ ಹುಣ್ಣಿಮೆಯನ್ನು ಸಂಭ್ರಮದಿಂದ ಆಚರಿಸಿದರು. ಮುಂಗಾರು ಮಳೆ ಆಗಾಗ ಸಿಂಚನವಾಗುತ್ತಿದ್ದು, ಹೊಲಗಳಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹೀಗಾಗಿ ಗುರುವಾರ ಬಿಡುವು ನೀಡಿ ರೈತಾಪಿ ವರ್ಗ ಖುಷಿ ಪಟ್ಟರು.</p>.<p><strong>ವಿಡಿಯೊ ನೋಡಿ</strong></p>.<p>ಯರಗೋಳ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಾರಹುಣ್ಣಿಮೆ ಅಂಗವಾಗಿ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಿಸಿದರು. ಯುವಕರು ಎತ್ತುಗಳ ಜೊತೆಯಲ್ಲಿ ಕುಣಿದು ಕುಪ್ಪಳಿಸಿದರು. ಹಿರಿಯರು ಜನಪದ ಹಾಡುಗಳು ಹಾಡಿದರು. ಮೆರವಣಿಗೆಯನ್ನು ವೀಕ್ಷಿಸಲು ನೂರಾರು ಸಂಖ್ಯೆಯ ಜನರು ಸೇರಿದ್ದರು.</p>.<p>ಟೆಂಗಿನಕಾಯಿ ಒಡೆದು, ನೈವೇದ್ಯ ಅರ್ಪಿಸಿ, ಭಕ್ತಿ ಸಮರ್ಪಿಸಿದರು. ಯುವತಿಯರು ಹೊಸ ಸೀರೆ ಉಟ್ಟು ಆರತಿ ಬೆಳಗಿದರು.</p>.<p>ಯರಗೋಳ, ಅಲ್ಲಿಪುರ, ಹೆಡಗಿಮದ್ರ, ಹೊನಗೇರಾ, ಹತ್ತಿಕುಣಿ, ಬಂದಳ್ಳಿ, ಯಡ್ಡಳ್ಳಿ, ಚಾಮನಳ್ಳಿ, ಬೆಳಗೇರಾ, ಖಾನಳ್ಳಿ, ಬಸವಂತಪುರ, ಕ್ಯಾಸಪನಳ್ಳಿ, ಹೋರುಂಚಾ, ಅಚ್ಚೋಲ, ಮುದ್ನಾಳ, ಮಲಕಪ್ಪನಳ್ಳಿ, ಕಂಚಗಾರಳ್ಳಿ, ಅಬ್ಬೆತುಮಕೂರು, ಬಾಚವಾರ, ಬೊಮ್ಮಚಟ್ನಳ್ಳಿ, ಸಮಣಪುರ ಗ್ರಾಮಗಳಲ್ಲಿ ಕಾರ ಹುಣ್ಣಿಮೆ ಸಂಭ್ರಮ ಜೋರಾಗಿತ್ತು.</p>.<p><a href="https://www.prajavani.net/india-news/patient-bitten-by-rat-in-hospital-dies-investigation-841938.html" itemprop="url">ಮುಂಬೈ: ಇಲಿ ಕಚ್ಚಿ ರೋಗಿಯ ಸಾವು, ತನಿಖೆಗೆ ಆದೇಶ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>