<p><strong>ವಡಗೇರಾ</strong>: ನೂತನ ತಾಲ್ಲೂಕು ಕೇಂದ್ರ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ವಿವಿಧ ಕಚೇರಿಗಳನ್ನು ಆರಂಭಿಸಬೇಕು ಮತ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೋಮವಾರ ಬಂದ್ ಆಚರಿಸಲಾಯಿತು.</p>.<p>ಕರವೇ ಕಾರ್ಯಕರ್ತರು ವಡಗೇರಾದಿಂದ ರಾಯಚೂರಿಗೆ ಹೋಗುವ ಹೆದ್ದಾರಿಯನ್ನು ಬೆಳಿಗ್ಗೆ 11 ಗಂಟೆಗೆ ತಡೆದು ಪ್ರತಿಭಟನಾಧರಣಿ ಆರಂಭಿಸಿದರು. 12 ಗಂಟೆ ಸುಮಾರಿಗೆ ವ್ಯಾಪಾರಸ್ಥರು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಸಾರ್ವಜನಿಕರೂ ಬೆಂಬಲಿಸಿದರು.</p>.<p>ತಾಲ್ಲೂಕು ಘೋಷಣೆಯಾಗಿ ಸುಮಾರು ಎರಡು ವರ್ಷ ಕಳೆದರೂ ಅಭಿವೃದ್ಧಿ ಕಾಣದೆ ಈ ಭಾಗದ ಜನರು ತೊಂದರೆ ಅನುಭವಿಸುತಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಗುರುಮಠಕಲ್, ಹುಣಸಿಗಿ ಮತ್ತು ವಡಗೇರಾ ಒಟ್ಟು ಮೂರು ತಾಲ್ಲೂಕು ಕೇಂದ್ರಗಳು ಘೋಷಣೆಯಾಗಿವೆ. ಹುಣಸಿಗಿ ಮತ್ತು ಗುರುಮಠಕಲ್ ಸ್ವಲ್ಪ ಅಭಿವೃದ್ಧಿ ಹೊಂದಿವೆ. ಆದರೆ ವಡಗೇರಾ ಮಾತ್ರ ಇನ್ನೂ ಯಾವುದೇ ಅಭಿವೃದ್ಧಿ ಕಂಡಿಲ್ಲ. ಈ ಕುರಿತು ಅನೇಕ ಸಾರಿ ಶಾಸಕರಿಗೆ, ಮುಖ್ಯಮಂತ್ರಿಗಳಿಗೆ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಅಗಿಲ್ಲ ಎಂದು ಕರವೇ ಪದಾಧಿಕಾರಿಳು ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ದೂರಿದ್ದಾರೆ.</p>.<p>ನೂತನ ತಾಲೂಕು ಕೇಂದ್ರದಲ್ಲಿ 44 ಕಚೇರಿಗಳು ಇರಬೇಕಿತ್ತು. ಆದರೆ ತಹಶೀಲ್ದಾರ್ ಕಚೇರಿ ಮಾತ್ರ ಆರಂಭವಾಗಿದೆ. ರಾಷ್ಟ್ರೀಕೃತ ಬ್ಯಾಂಕ್, ತಾಲ್ಲೂಕು ಆಸ್ಪತ್ರೆ, ರಸ್ತೆ, ಕುಡಿಯುವ ನೀರು ಹಾಗೂ ಈ ಭಾಗದ ವಿಧ್ಯಾರ್ಥಿಗಳಿಗೆ ಪದವಿ ಕಾಲೇಜು ಐಟಿಐ ಸೇರಿದಂತೆ ಯಾವುದೇ ಉನ್ನತ ಶಿಕ್ಷಣ ಸಂಸ್ತೆಗಳಿಲ್ಲ. ದೂರದ ಯಾದಗಿರಿ, ಶಹಾಪುರಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಈ ಸಮಸ್ಯೆಗಳನ್ನು ಪರಿಹರಿಸಿ ತಾಲ್ಲೂಕು ಕೇಂದ್ರವನ್ನು ಅಭಿವೃದ್ಧಿ ಮಾಡಬೇಕು ಎಂದು ಆಗ್ರಹಪಡಿಸಿದರು.</p>.<p>ತಹಶೀಲ್ದಾರ್ ಸಂತೋಷರಾಣಿ, ಕರವೇ ಜಿಲ್ಲಾ ಅಧ್ಯಕ್ಷ ಟಿ.ಎನ್.ಭೀಮುನಾಯಕ, ಉಪಾಧ್ಯಕ್ಷ ಅಬ್ದುಲ್ ಚಿಗಾನೂರು, ಚೌಡಯ್ಯ ಬಾವೂರು, ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ಕೊಂಕಲ್, ಹಣಮಂತ್ರಾಯ ತೇಕರಾಳ, ಮಲ್ಲು ಕಲ್ಮನಿ, ಭೀಮಣ್ಣ ಬುದಿನಾಳ, ಸಿದ್ದು ನಾಯಕ, ತೆಜು ರಾಥೋಡ್, ರಾಜು ಜವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ</strong>: ನೂತನ ತಾಲ್ಲೂಕು ಕೇಂದ್ರ ವಡಗೇರಾ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ವಿವಿಧ ಕಚೇರಿಗಳನ್ನು ಆರಂಭಿಸಬೇಕು ಮತ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸೋಮವಾರ ಬಂದ್ ಆಚರಿಸಲಾಯಿತು.</p>.<p>ಕರವೇ ಕಾರ್ಯಕರ್ತರು ವಡಗೇರಾದಿಂದ ರಾಯಚೂರಿಗೆ ಹೋಗುವ ಹೆದ್ದಾರಿಯನ್ನು ಬೆಳಿಗ್ಗೆ 11 ಗಂಟೆಗೆ ತಡೆದು ಪ್ರತಿಭಟನಾಧರಣಿ ಆರಂಭಿಸಿದರು. 12 ಗಂಟೆ ಸುಮಾರಿಗೆ ವ್ಯಾಪಾರಸ್ಥರು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಸಾರ್ವಜನಿಕರೂ ಬೆಂಬಲಿಸಿದರು.</p>.<p>ತಾಲ್ಲೂಕು ಘೋಷಣೆಯಾಗಿ ಸುಮಾರು ಎರಡು ವರ್ಷ ಕಳೆದರೂ ಅಭಿವೃದ್ಧಿ ಕಾಣದೆ ಈ ಭಾಗದ ಜನರು ತೊಂದರೆ ಅನುಭವಿಸುತಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಗುರುಮಠಕಲ್, ಹುಣಸಿಗಿ ಮತ್ತು ವಡಗೇರಾ ಒಟ್ಟು ಮೂರು ತಾಲ್ಲೂಕು ಕೇಂದ್ರಗಳು ಘೋಷಣೆಯಾಗಿವೆ. ಹುಣಸಿಗಿ ಮತ್ತು ಗುರುಮಠಕಲ್ ಸ್ವಲ್ಪ ಅಭಿವೃದ್ಧಿ ಹೊಂದಿವೆ. ಆದರೆ ವಡಗೇರಾ ಮಾತ್ರ ಇನ್ನೂ ಯಾವುದೇ ಅಭಿವೃದ್ಧಿ ಕಂಡಿಲ್ಲ. ಈ ಕುರಿತು ಅನೇಕ ಸಾರಿ ಶಾಸಕರಿಗೆ, ಮುಖ್ಯಮಂತ್ರಿಗಳಿಗೆ ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಅಗಿಲ್ಲ ಎಂದು ಕರವೇ ಪದಾಧಿಕಾರಿಳು ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ದೂರಿದ್ದಾರೆ.</p>.<p>ನೂತನ ತಾಲೂಕು ಕೇಂದ್ರದಲ್ಲಿ 44 ಕಚೇರಿಗಳು ಇರಬೇಕಿತ್ತು. ಆದರೆ ತಹಶೀಲ್ದಾರ್ ಕಚೇರಿ ಮಾತ್ರ ಆರಂಭವಾಗಿದೆ. ರಾಷ್ಟ್ರೀಕೃತ ಬ್ಯಾಂಕ್, ತಾಲ್ಲೂಕು ಆಸ್ಪತ್ರೆ, ರಸ್ತೆ, ಕುಡಿಯುವ ನೀರು ಹಾಗೂ ಈ ಭಾಗದ ವಿಧ್ಯಾರ್ಥಿಗಳಿಗೆ ಪದವಿ ಕಾಲೇಜು ಐಟಿಐ ಸೇರಿದಂತೆ ಯಾವುದೇ ಉನ್ನತ ಶಿಕ್ಷಣ ಸಂಸ್ತೆಗಳಿಲ್ಲ. ದೂರದ ಯಾದಗಿರಿ, ಶಹಾಪುರಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಈ ಸಮಸ್ಯೆಗಳನ್ನು ಪರಿಹರಿಸಿ ತಾಲ್ಲೂಕು ಕೇಂದ್ರವನ್ನು ಅಭಿವೃದ್ಧಿ ಮಾಡಬೇಕು ಎಂದು ಆಗ್ರಹಪಡಿಸಿದರು.</p>.<p>ತಹಶೀಲ್ದಾರ್ ಸಂತೋಷರಾಣಿ, ಕರವೇ ಜಿಲ್ಲಾ ಅಧ್ಯಕ್ಷ ಟಿ.ಎನ್.ಭೀಮುನಾಯಕ, ಉಪಾಧ್ಯಕ್ಷ ಅಬ್ದುಲ್ ಚಿಗಾನೂರು, ಚೌಡಯ್ಯ ಬಾವೂರು, ತಾಲ್ಲೂಕು ಅಧ್ಯಕ್ಷ ಶಿವಕುಮಾರ್ ಕೊಂಕಲ್, ಹಣಮಂತ್ರಾಯ ತೇಕರಾಳ, ಮಲ್ಲು ಕಲ್ಮನಿ, ಭೀಮಣ್ಣ ಬುದಿನಾಳ, ಸಿದ್ದು ನಾಯಕ, ತೆಜು ರಾಥೋಡ್, ರಾಜು ಜವ್ಹಾಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>